ಪರ್ಯಾಯ ವ್ಯವಸ್ಥೆ ಕಲ್ಪಿಸದೆ ದಾಳಿ ಸಲ್ಲದು: ವ್ಯಾಪಾರಿಗಳ ಮನವಿ

ವ್ಯಾಪಾರಸ್ಥರ ಮೇಲೆ ದಂಡ ಹಾಕುವ ಬದಲು ಪ್ಲಾಸ್ಟಿಕ್ ತಯಾರಿಕಾ ಕಂಪನಿಗಳನ್ನು ಬಂದ್ ಮಾಡಿ ಪ್ಲಾಸ್ಟಿಕ್ ಮುಕ್ತ ಮಾಡಿರಿ ಎಂದು ಪುರಸಭೆ ಮುಖ್ಯಾಧಿಕಾರಿಗೆ ಅಂಗಡಿ ಮಾಲೀಕರು ಮನವಿ ಮಾಡಿದ್ದಾರೆ.

ಜಾಹೀರಾತು

ಭವಿಷ್ಯದ ಹಿತದೃಷ್ಟಿಯಿಂದ ಪ್ಲಾಸ್ಟಿಕ್ ನಿಷೇಧ ಕಾರ್ಯಚರಣೆ ಅಗತ್ಯವಾಗಿದ್ದು ಪುರಸಭೆಯ ಕಾರ್ಯ ಸ್ವಾಗತಾರ್ಹ.  ಗ್ರಾಹಕರಿಗೆ ಪ್ಲಾಸ್ಟಿಕ್ ಚೀಲಗಳನ್ನು ನೀಡಬಾರದು ಎನ್ನುವ ಪುರಸಭೆ  ಅನಿವಾರ್ಯವಾಗಿ ಮಾರಾಟ ಮಾಡುವ ವ್ಯಾಪಾರಿಗಳ ಮೇಲೆ ದಂಡ ವಿಸುವುದು ರಿಯಲ್ಲ. ಪ್ಲಾಸ್ಟಿಕ್ ಚೀಲ ತಯಾರಾಗದೇ ಇದ್ದರೆ ನಾವು ಗ್ರಾಹಕರಿಗೆ ನೀಡುವ ಸಂಭವವೇ ಇರುವುದಿಲ್ಲ. ಕಾರ್ಯಚರಣೆಯ ವೇಳೆ ದಿನವೊಂದಕ್ಕೆ ಐನ್ನೂರರಿಂದ  ಒಂದು ಸಾವಿರ ರುಪಾಯಿ ವ್ಯಾಪಾರ ಮಾಡುವ ಸಣ್ಣ ವ್ಯಾಪಾರಿಗೆ 5 ಸಾವಿರ ರೂಪಾಯಿ ದಂಡ ಹಾಕುವುದು ನ್ಯಾಯಸಮ್ಮತವಲ್ಲ ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ. ವ್ಯಾಪಾರಿಗಳ ಮನವಿಗೆ ಸ್ಪಂದಿಸಿದ ರೇಖಾ ಶೆಟ್ಟಿ ಪ್ಲಾಸ್ಟಿಕ್ ನಿಷೇಧ ಕಾರ್ಯಚರಣೆ ನ್ಯಾಯಾಲಯದ ಆದೇಶವಾಗಿದ್ದು ಈ ಬಗ್ಗೆ ವ್ಯಾಪಾರಿಗಳಿಗೆ ಆಗುತ್ತಿರುವ ಸಮಸ್ಯೆಯ ಬಗ್ಗೆ ಜಿಲ್ಲಾಧಿಕಾರಿ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಮನವಿ ಸಲ್ಲಿಸುವಂತೆ ಸಲಹೆ ನೀಡಿದರು.

ಈ ಸಂದರ್ಭ ಬಂಟ್ವಾಳದ ವ್ಯಾಪಾರಿಗಳಾದ ಪ್ರಕಾಶ್ ಅಂಚನ್, ಮಹಾಬಲ ಬಂಗೇರ, ಅಬ್ದುಲ್ ಕಯ್ಯಾಂ, ಬಾಲಕೃಷ್ಣ ಪೂಜಾರಿ, ಸದಾಶಿವ ಭಂಡಾರಿ, ಭಾಸ್ಕರ ಪೂಜಾರಿ, ಮಹಮ್ಮದ್ ಸಮೀರ್ ಮತ್ತಿತರರು ಹಾಜರಿದ್ದರು.

ಇಲ್ಲಿನ ಪುರಸಭೆ ವ್ಯಾಪ್ತಿಯ ಬಡ್ಡಕಟ್ಟೆ ಹಾಗೂ ಬಂಟ್ವಾಳ ಪೇಟೆ ಪರಿಸರದ ಅಂಗಡಿಗಳಲ್ಲಿ  ಪುರಸಭಾ ಅಕಾರಿಗಳು ಬುಧವಾರ ಕಾರ್ಯಚರಣೆ ನಡೆಸಿ ಪ್ಲಾಸ್ಟಿಕ್ ಕೈ ಚೀಲಗಳನ್ನು ವಶಪಡಿಸಿಕೊಂಡಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಪರ್ಯಾಯ ವ್ಯವಸ್ಥೆ ಕಲ್ಪಿಸದೆ ದಾಳಿ ಸಲ್ಲದು: ವ್ಯಾಪಾರಿಗಳ ಮನವಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*