ಪರ್ಯಾಯ ವ್ಯವಸ್ಥೆ ಕಲ್ಪಿಸದೆ ದಾಳಿ ಸಲ್ಲದು: ವ್ಯಾಪಾರಿಗಳ ಮನವಿ

ವ್ಯಾಪಾರಸ್ಥರ ಮೇಲೆ ದಂಡ ಹಾಕುವ ಬದಲು ಪ್ಲಾಸ್ಟಿಕ್ ತಯಾರಿಕಾ ಕಂಪನಿಗಳನ್ನು ಬಂದ್ ಮಾಡಿ ಪ್ಲಾಸ್ಟಿಕ್ ಮುಕ್ತ ಮಾಡಿರಿ ಎಂದು ಪುರಸಭೆ ಮುಖ್ಯಾಧಿಕಾರಿಗೆ ಅಂಗಡಿ ಮಾಲೀಕರು ಮನವಿ ಮಾಡಿದ್ದಾರೆ.

ಜಾಹೀರಾತು

ಭವಿಷ್ಯದ ಹಿತದೃಷ್ಟಿಯಿಂದ ಪ್ಲಾಸ್ಟಿಕ್ ನಿಷೇಧ ಕಾರ್ಯಚರಣೆ ಅಗತ್ಯವಾಗಿದ್ದು ಪುರಸಭೆಯ ಕಾರ್ಯ ಸ್ವಾಗತಾರ್ಹ.  ಗ್ರಾಹಕರಿಗೆ ಪ್ಲಾಸ್ಟಿಕ್ ಚೀಲಗಳನ್ನು ನೀಡಬಾರದು ಎನ್ನುವ ಪುರಸಭೆ  ಅನಿವಾರ್ಯವಾಗಿ ಮಾರಾಟ ಮಾಡುವ ವ್ಯಾಪಾರಿಗಳ ಮೇಲೆ ದಂಡ ವಿಸುವುದು ರಿಯಲ್ಲ. ಪ್ಲಾಸ್ಟಿಕ್ ಚೀಲ ತಯಾರಾಗದೇ ಇದ್ದರೆ ನಾವು ಗ್ರಾಹಕರಿಗೆ ನೀಡುವ ಸಂಭವವೇ ಇರುವುದಿಲ್ಲ. ಕಾರ್ಯಚರಣೆಯ ವೇಳೆ ದಿನವೊಂದಕ್ಕೆ ಐನ್ನೂರರಿಂದ  ಒಂದು ಸಾವಿರ ರುಪಾಯಿ ವ್ಯಾಪಾರ ಮಾಡುವ ಸಣ್ಣ ವ್ಯಾಪಾರಿಗೆ 5 ಸಾವಿರ ರೂಪಾಯಿ ದಂಡ ಹಾಕುವುದು ನ್ಯಾಯಸಮ್ಮತವಲ್ಲ ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ. ವ್ಯಾಪಾರಿಗಳ ಮನವಿಗೆ ಸ್ಪಂದಿಸಿದ ರೇಖಾ ಶೆಟ್ಟಿ ಪ್ಲಾಸ್ಟಿಕ್ ನಿಷೇಧ ಕಾರ್ಯಚರಣೆ ನ್ಯಾಯಾಲಯದ ಆದೇಶವಾಗಿದ್ದು ಈ ಬಗ್ಗೆ ವ್ಯಾಪಾರಿಗಳಿಗೆ ಆಗುತ್ತಿರುವ ಸಮಸ್ಯೆಯ ಬಗ್ಗೆ ಜಿಲ್ಲಾಧಿಕಾರಿ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಮನವಿ ಸಲ್ಲಿಸುವಂತೆ ಸಲಹೆ ನೀಡಿದರು.

ಈ ಸಂದರ್ಭ ಬಂಟ್ವಾಳದ ವ್ಯಾಪಾರಿಗಳಾದ ಪ್ರಕಾಶ್ ಅಂಚನ್, ಮಹಾಬಲ ಬಂಗೇರ, ಅಬ್ದುಲ್ ಕಯ್ಯಾಂ, ಬಾಲಕೃಷ್ಣ ಪೂಜಾರಿ, ಸದಾಶಿವ ಭಂಡಾರಿ, ಭಾಸ್ಕರ ಪೂಜಾರಿ, ಮಹಮ್ಮದ್ ಸಮೀರ್ ಮತ್ತಿತರರು ಹಾಜರಿದ್ದರು.

ಇಲ್ಲಿನ ಪುರಸಭೆ ವ್ಯಾಪ್ತಿಯ ಬಡ್ಡಕಟ್ಟೆ ಹಾಗೂ ಬಂಟ್ವಾಳ ಪೇಟೆ ಪರಿಸರದ ಅಂಗಡಿಗಳಲ್ಲಿ  ಪುರಸಭಾ ಅಕಾರಿಗಳು ಬುಧವಾರ ಕಾರ್ಯಚರಣೆ ನಡೆಸಿ ಪ್ಲಾಸ್ಟಿಕ್ ಕೈ ಚೀಲಗಳನ್ನು ವಶಪಡಿಸಿಕೊಂಡಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪರ್ಯಾಯ ವ್ಯವಸ್ಥೆ ಕಲ್ಪಿಸದೆ ದಾಳಿ ಸಲ್ಲದು: ವ್ಯಾಪಾರಿಗಳ ಮನವಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*