ಗ್ರಾಪಂ ಉಪಚುನಾವಣೆ: ಶಾಂತಿಯುತ ಮತದಾನ

ಬಂಟ್ವಾಳ ತಾಲೂಕಿನ ಅಮ್ಟಾಡಿ ಹಾಗೂ ಇರ್ವತ್ತೂರು ಗ್ರಾ.ಪಂಗಳಲ್ಲಿ ತೆರವಾಗಿದ್ದ ತಲಾ ಒಂದೊಂದು ಸ್ಥಾನಗಳಿಗೆ ಗುರುವಾರ ಶಾಂತಿಯುತವಾಗಿ ಉಪಚುನಾವಣೆ ನಡೆಯಿತು.

ಜಾಹೀರಾತು

ಅಮ್ಟಾಡಿ ಪಂಚಾಯಿತಿ ಸದಸ್ಯೆ ಚಂದ್ರಾವತಿ ಬಿ. ಭಂಡಾರಿ ಅವರ ನಿಧನದಿಂದ ತೆರವಾಗಿದ್ದ ಒಂದು ಸ್ಥಾನಕ್ಕೆ ಬಂಟ್ವಾಳದ ಎಸ್‌ವಿಎಸ್ ಟೆಂಪಲ್ ಶಾಲೆಯಲ್ಲಿ ಉಪಚುನಾವಣೆ ನಡೆಯಿತು. ಸದಸ್ಯೆಯಾಗಿದ್ದ ಚಂದ್ರಾವತಿಯವರು ಕಳೆದ ಕೆಲ ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟ ಹಿನ್ನಲೆಯಲ್ಲಿ ಈ ಸ್ಥಾನ ತೆರವಾಗಿತ್ತು. ಇಬ್ಬರು ಅಭ್ಯರ್ಥಿಗಳು ಕಣದಲ್ಲಿದ್ದು ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸುರೇಂದ್ರ ಪೂಜಾರಿ, ಹಾಗೂ ಸಿಪಿಐ ಬೆಂಬಲಿತ ಅಭ್ಯರ್ಥಿಯಾಗಿ ಮೃತ ಚಂದ್ರಾವತಿಯವರ ಪತಿ ಬಾಬು ಭಂಡಾರಿ ಸ್ಪರ್ಧಿಸಿದ್ದಾರೆ. ಒಟ್ಟು 1009 ಮತದಾರರ ಪೈಕಿ 323 ಪುರಷರು ಹಾಗೂ 336 ಮಹಿಳೆಯರು ಮತಚಲಾಯಿಸಿದ್ದು ಶೇ. 65ಮತದಾನವಾಗಿದೆ.

ಇರ್ವತ್ತೂರು ಗ್ರಾಮ ಪಂಚಾಯತ್‌ನ ಮೂಡುಪಡುಕೋಡಿ 1ನೇ ಕ್ಷೇತ್ರದ ತೆರವಾದ ಒಂದು ಸ್ಥಾನಕ್ಕೆ ಗುರುವಾರ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸುಧೀಂದ್ರ ಶೆಟ್ಟಿ ಮತ್ತು ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಜನಾರ್ದನ ಶೆಟ್ಟಿ ಅವರು ಸ್ಪರ್ಧಿಸಿದ್ದರು. ಹಿಂದಿನ ಸದಸ್ಯ ಸುಂದರ ಶೆಟ್ಟಿ ಪಂಚಾಯಿತಿಯ ಸಾಮಾನ್ಯ ಸಭೆಗೆ ನಿರಂತರವಾಗಿ ಗೈರು ಹಾಜರಾದ ಹಿನ್ನಲೆಯಲ್ಲಿ ಅವರ ಸದಸ್ಯತ್ವ ರದ್ದಾಗಿತ್ತು. ವಾರ್ಡಿನ
994 ಮತದಾರರ ಪೈಕಿ 315 ಮಹಿಳೆಯರು ಹಾಗೂ ೩೮೭ ಪುರುಷರು ಮತಚಲಾಯಿಸಿದ್ದು ಶೇ. 70 ಮತದಾನವಾಗಿದೆ. ಎರಡೂ ಸ್ಥಾನಗಳ ಮತ ಎಣಿಕೆ ಜೂ. 17ರಂದು ಭಾನುವಾರ ಬಿ.ಸಿ.ರೋಡಿನ ಮಿನಿ ವಿಧಾನಸೌದದಲ್ಲಿ ನಡೆಯಲಿದೆ.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಗ್ರಾಪಂ ಉಪಚುನಾವಣೆ: ಶಾಂತಿಯುತ ಮತದಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*