ಬಂಟ್ವಾಳ

ಮೀಸಲಾತಿಯಲ್ಲಿ ಗೊಂದಲ: ಎಸ್.ಡಿ.ಪಿ.ಐ. ಮನವಿ

ಸೆಪ್ಟಂಬರ್‌ನಲ್ಲಿ ನಡೆಸಲುದ್ದೇಶಿಸಿರುವ ಬಂಟ್ವಾಳ ಪುರಸಭೆಯ ಚುನಾವಣೆಗೆ ಸಂಬಂಧಿಸಿದಂತೆ ಪುರಸಭೆಯ ವ್ಯಾಪಿಯನ್ನು ಮರುವಿಂಗಡಿಸಿ ವಾರ್ಡುವಾರು ಮೀಸಲಾತಿಯನ್ನು ಪ್ರಕಟಿಸಲಾಗಿದೆ. ಆದರೆ ಈ ಮೀಸಲಾತಿಯು ಸಂಪೂರ್ಣಗೊಂದಲವಾಗಿದ್ದು, ಅದನ್ನು ಸರಿಪಡಿಸುವಂತೆ ಒತ್ತಾಯಿಸಿ ಎಸ್‌ಡಿಪಿಐ ನಿಯೋಗವು ಗುರುವಾರ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿತು.

ಈಗಾಗಲೇ ಪ್ರಕಟಗೊಂಡ 27 ವಾರ್ಡ್ ಗಳಲ್ಲಿ 12 ಮಹಿಳಾ ಮೀಸಲಾತಿ ನೀಡಿದ್ದು, ಅದರಲ್ಲೂ ಮುಸ್ಲಿಮ್ ಪ್ರಾಬಲ್ಯವಿರುವ ವಾರ್ಡ್‌ಗಳ ೭ ವಾರ್ಡ್‌ಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲಾಗಿದೆ. ಅಲ್ಲದೆ ಮುಸ್ಲಿಮರೇತರ ಮತದಾರರೇ ಇಲ್ಲದ ವಾರ್ಡ್ ಗಳಲ್ಲಿ ಮುಸ್ಲಿಮರೇತರರಿಗೆ ಮೀಸಲಿರಿಸಲಾಗಿರುವ ವಿಚಾರವನ್ನು ನಿಯೋಗವು ಜಿಲ್ಲಾಧಿಕಾರಿಯವರಿಗೆ ಮನವಿಯ ಮೂಲಕ ತಿಳಿಸಿದೆ.

ಜಾಹೀರಾತು

ಪ್ರಸಕ್ತ ಗೊಂದಲಮಯ ಮೀಸಲಾತಿಯನ್ನು ರದ್ದುಪಡಿಸಿ ಜನಸಂಖ್ಯಾಧರಿತ ಮೀಸಲಾತಿ ಪ್ರಕಟಿಸಲು ಮನವಿ ಮೂಲಕ ಒತ್ತಾಯಿಸಲಾಗಿದೆ.
ಈ ನಿಯೋಗದಲ್ಲಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೊಕಟ್ಟೆ, ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ, ಜಿಲ್ಲಾಕೋಶಾಧಿಕಾರಿ ಇಕ್ಬಾಲ್ ಐಎಂಆರ್, ಕ್ಷೇತ್ರಾಧ್ಯಕ್ಷ ಶಾಹುಲ್ ಎಸ್.ಎಚ್., ಪುರಸಭಾ ಸಮಿತಿ ಅಧ್ಯಕ್ಷ ಮುನಿಶ್ ಅಲಿ, ಕಾರ್ಯದರ್ಶಿ ಸಿದ್ದೀಕ್ ನಂದರಬೆಟ್ಟು ಮೊದಲಾದವರು ಹಾಜರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts