28ನೇ ಉರೂಸ್ ಮುಬಾರಕ್ ಜೂನ್ 18ರಿಂದ 23ರ ವರೆಗೆ

ದಕ್ಷಿಣ ಭಾರತದ ಸುಪ್ರಸಿದ್ಧ ಝಿಯಾರತ್ ಕೇಂದ್ರವಾದ ಮಡವೂರು ಸಿ.ಎಂ ಮಖಾಂ ಶರೀಫ್ನಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ವಲಿಯುಲ್ಲಾಹಿ ಸಿ.ಎಂ ಮಹಮ್ಮದ್ ಅಬೂಬಕ್ಕರ್ ಮುಸ್ಲಿಯಾರ್ ರವರ 28ನೇ ಉರೂಸ್ ಮುಬಾರಕ್ ಜೂನ್ 18ರಿಂದ 23ರ ವರೆಗೆ ನಡೆಯಲಿದೆ ಎಂದು ಅನಿಲಕಟ್ಟೆ ಮಡವೂರು ಸಿ.ಎಂ ಮಖಾಂ ಯತೀಂಖಾನ ಎಜುಕೇಶನಲ್ ಮತ್ತು ಕಲ್ಚರಲ್ ಕಾಂಪ್ಲೆಕ್ಸ್ ಕನ್ವೀನರ್ ಸಿ.ಎಚ್ ಇಬ್ರಾಹಿಂ ಮುಸ್ಲಿಯಾರ್ ತಿಳಿಸಿದರು.

ಅವರು ವಿಟ್ಲದ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಉರೂಸ್ ಪ್ರಯುಕ್ತ ವಿವಿಧ ದಿನಾಂಕಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಖಾಂ ಝಿಯಾರತ್, ಧ್ವಜಾರೋಹಣ, ಸಿ.ಎಂ ಅನುಸ್ಮರಣ ಸಮ್ಮೇಳನ, ಮತ ಪ್ರಭಾಷಣ, ಮಜ್ಲಿಸುನ್ನೂರು, ಸನದುದಾನ ಸಮ್ಮೇಳನ, ಸ್ವಲಾತ್ ಮಜ್ಲೀಸ್, ದ್ಸಿಕ್ರ್ ದುಃಆ, ಅನ್ನದಾನ ಮುಂತಾದ ಕಾರ್ಯಕ್ರಮಗಳೊಂದಿಗೆ ಅತೀ ವಿಜೃಂಭಣೆಯಿಂದ ಆಚರಿಸಲ್ಪಡುವ ಕಾರ್ಯಕ್ರಮಕ್ಕೆ ಕರ್ನಾಟಕದ ಪ್ರತಿನಿಧಿಗಳಾಗಿ ಕುನ್ನುಂಗೈ ತಂಙಳ್, ಮಿತ್ತಬೈಲು ಉಸ್ತಾದ್, ಮಂಗಳೂರು ಖಾಝಿ ತ್ವಾಖಾ ಉಸ್ತಾದ್, ಕುಕ್ಕಾಜೆ ತಂಙಳ್, ಕಿನ್ಯ ತಂಙಳ್, ಹಬೀಬು ತಂಙಳ್, ಉದ್ಯಾವರ ತಂಙಳ್, ಕಿನ್ಯ ದಾರಿಮಿ, ರೆಂಜಲಾಡಿ ದಾರಿಮಿ ಹಾಗೂ ಇನ್ನಿತರ ಉಲಮಾ ಉಮರಾ ರಾಜಕೀಯ ನೇತಾರರು, ಭಾಗವಹಿಸಲಿದ್ದಾರೆ ಎಂದು ತಿಳಿಸಿದ ಅವರು ಕರ್ನಾಟಕ ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಜಾಹೀರಾತು

ಪತ್ರಿಕಾಗೋಷ್ಠಿಯಲ್ಲಿ ಸಯ್ಯದ್ ಹುಸೈನ್ ಬಾಲವಿ ತಂಙಳ್ ಕುಕ್ಕಾಜೆ, ಪಿ. ಮೊಹಮ್ಮದ್ ಮುಸ್ಲಿಯಾರ್, ಕೆ. ಹಸೈನಾರ್ ಮುಸ್ಲಿಯಾರ್, ಅಬೂಬಕ್ಕರ್ ಮಂಗಳಪದವು, ಅಬೂಬಕ್ಕರ್ ಅನಿಲಕಟ್ಟೆ ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "28ನೇ ಉರೂಸ್ ಮುಬಾರಕ್ ಜೂನ್ 18ರಿಂದ 23ರ ವರೆಗೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*