ವಿಟ್ಲದಲ್ಲಿ ಈದುಲ್ ಫಿತರ್

ವಿಟ್ಲ ಭಾಗದಲ್ಲಿ ಶುಕ್ರವಾರ ಸಡಗರದಲ್ಲಿ ಮುಸ್ಲಿಂ ಬಾಂಧವರು ಈದುಲ್ ಫಿತರ್ ಆಚರಿಸಿದರು.

ಜಾಹೀರಾತು

ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಖತೀಬು ಅಬ್ದುಲ್ ಸಲಾಂ ಲತೀಫಿ ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿ ಸಂದೇಶ ನೀಡಿ ಮಾತನಾಡಿ ಹಬ್ಬಗಳ ಆಚರಣೆಗಳು ಇನ್ನೊಬ್ಬರಿಗೆ ತೊಂದರೆ ನೀಡುವುದಲ್ಲ. ಇಸ್ಲಾಂ ನಿಷೇಧ ಮಾಡಿದ ಕಾರ್ಯಗಳನ್ನು ಮಾಡುವುದಲ್ಲ. ಅನಾಚಾರ ವಿಷಯಗಳಿಗೆ ಹೋಗುವುದಲ್ಲ ಪ್ರತಿಯೊಬ್ಬರು ಐಕ್ಯತೆಯಿಂದ ಬದುಕುವುದಾಗಿದೆ ಎಂದು ಹೇಳಿದರು. ಲೋಕದಲ್ಲಿ ಎಲ್ಲಿಯಾದರೂ ಒಬ್ಬರಿಗೆ ಸಮಸ್ಯೆಯಾದರೆ ಅದು ನಮ್ಮ ಸಮಸ್ಯೆ ಎಂದು ಭಾವಿಸಿ ಅವರಿಗೆ ಸಹಾಯಹಸ್ತ ನೀಡಬೇಕು. ಇದರಿಂದ ನೈಜ ಮುಸಲ್ಮಾನನಾಗಿ ಜೀವಿಸಲು ಸಾಧ್ಯ. ಪ್ರತಿಯೊಬ್ಬರ ದುಃಖದಲ್ಲಿ ಭಾಗಿಯಾಗುವುದು ಪ್ರತಿಯೊಬ್ಬನ ಕರ್ತವ್ಯವಾಗಿದೆ ಎಂದು ಹೇಳಿದರು.

ವಿಟ್ಲ ಸಮೀಪದ ಕೆಲಿಂಜ ಮುಹಿಯ್ಯದ್ದೀನ್ ಜುಮ್ಮಾ ಮಸೀದಿಯಲ್ಲಿ ಎಸ್.ಎಮ್, ಅಬ್ಬಾಸ್ ದಾರಿಮಿ ಕೆಲಿಂಜ ಅವರು ಈದ್ ನಮಾಜ್ಗೆ ನೇತೃತ್ವ ವಹಿಸಿದ್ದರು. ವಿಶೇಷ ಪ್ರಾರ್ಥನೆಯ ಮೊದಲು ಈದ್ ಸಂದೇಶ ನೀಡಿ ಈದ್ಉಲ್ ಫಿತರ್ ಹಬ್ಬವು ಶಾಂತಿ ಸಮದಾನ ಸಹೋದರತೆಯ ಸಂಕೇತವಾಗಿದೆ. ಪ್ರತಿಯೊಬ್ಬರೂ ದ್ವೇಷ ವೈರಾಗ್ಯವನ್ನು ಬಿಟ್ಟು ಶಾಂತಿಯಿಂದ ಬಾಳಿ ಮತ್ತು ಕುಟುಂಬ ಬಂಧವನ್ನು ಬಲಪಡಿಸಿ ಒಗ್ಗಾಟಾಗಿ ಬಾಳಿ ಅಲ್ಲಾಹುವಿನ ದಾಸರಾಗಿ ಎಂದು ಹೇಳಿದರು.

ಬಳಿಕ ಎಸ್ಕೆಎಸ್ಎಸ್ಎಫ್ ಕೆಲಿಂಜ ಶಾಖೆ ವತಿಯಿಂದ  ಈದ್ ಮಿಲನ್ ಆಚರಿಸಿದರು. ಮಸೀದಿಯಲ್ಲಿ ಹಾಗೂ ವಾಹನದಲ್ಲಿ ಹೋಗುವ ಪ್ರತಿಯೊಬ್ಬರಿಗೆ  ಸಿಹಿತಿಂಡಿ ವಿತರಿಸಿ ಈದ್ ಹಬ್ಬದ ಶುಭಾಶಯ ಕೋರಿದರು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ವಿಟ್ಲದಲ್ಲಿ ಈದುಲ್ ಫಿತರ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*