ಸರ್ವ ಶಿಕ್ಷಣ ಅಭಿಯಾನದಡಿ ಶಿಕ್ಷಕರ ವೇತನ ವಿಳಂಬವಾಗುತ್ತಿದ್ದು, ಶೀಘ್ರ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಲುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸೂಚನೆ ನೀಡಿದ್ದಾರೆ.
ಜಾಹೀರಾತು
ಕೇಂದ್ರ ಸರಕಾರದ ಸರ್ವಶಿಕ್ಷಣ ಅಭಿಯಾನ ಯೋಜನೆಯಡಿ, ಬಂಟ್ವಾಳ ತಾಲೂಕಿನ ಹಲವು ಶಾಲೆ ಗಳಲ್ಲಿ ಸೇವೆ ಸಲ್ಲಿಸುತ್ತಿರುವ 132 ಕ್ಕೂ ಹೆಚ್ಚು ಮಂದಿ ಎಸ.ಎಸ್.ಎ.ಶಿಕ್ಷಕರಿಗೆ ಬಂಟ್ವಾಳ ತಾಲೂಕಿಗೆ ಬಿಡುಗಡೆ ಗೊಳ್ಳುವ ಶಿಕ್ಷಕರ ಸಂಬಳದ ಶೀರ್ಷಿಕೆ ಬೆಳ್ತಂಗಡಿ ತಾಲೂಕಿಗೆ ಬದಲಾವಣೆ ಅಗಿರುವುದರಿಂದ ಕಳೆದ ಮಾರ್ಚ ತಿಂಗಳಿನಿಂದ ವೇತನ ಪಾವತಿಯಾಗಿಲ್ಲ. ಹಲವು ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನ ವಾಗಿರಲಿಲ್ಲ. ಇದೀಗ ವೇತನ ವಂಚಿತ ಶಿಕ್ಷಕರು ಬಂಟ್ವಾಳ ಶಾಸಕರನ್ನು ಬೇಟಿಯಾಗಿ ಮನವಿ ಸಲ್ಲಿಸಿದ್ದು, ಇದಕ್ಕೆ ಸ್ಪಂದಿಸಿದ ಶಾಸಕ ರಾಜೇಶ್ ನಾಯ್ಕ್ ಶೀಘ್ರ ವೇತನ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯ ಮಟ್ಟದ ಅಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ಶಾಸಕರ ಪ್ರಕಟಣೆ ತಿಳಿಸಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to comment on "ಶಿಕ್ಷಕರ ವೇತನ ಶೀಘ್ರ ಪಾವತಿಗೆ ರಾಜೇಶ್ ನಾಯ್ಕ್ ಸೂಚನೆ"