ಪೊಳಲಿ ದೇವರಿಗೆ ಮಾಜಿ ಸಚಿವ ರೈ ಮೊರೆ

ಪೊಳಲಿ ದೇವಸ್ಥಾನಕ್ಕೆ ಕೊಡಿಮರ ಸಮರ್ಪಣೆ ಸಂದರ್ಭ ತನ್ನ ವಿರುದ್ಧ ಅಪಪ್ರಚಾರ ಮಾಡಲಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಶುಕ್ರವಾರ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿ ಮೊರೆ ಹೋಗಿ ಪ್ರಾರ್ಥನೆ ಸಲ್ಲಿಸಿದರು.

ಜಾಹೀರಾತು

ದೇವಸ್ಥಾನದ ಸನ್ನಿಧಿಯಲ್ಲಿ ಅಪಪ್ರಚಾರದ ಕುರಿತಾಗಿ ಮನಸ್ಸಿನ ಭಾವನೆಯನ್ನು ನಿವೇದಿಸಿಕೊಂಡ ರೈ, ತನ್ನ ಬಗ್ಗೆ ಅಪಪ್ರಚಾರ ನಡೆಸಿದವರಿಗೆ ಸದ್ಭುದ್ದಿ ನೀಡಬೇಕು, ಮತ್ತು ಸತ್ಯ ಏನೆಂದು ಎಲ್ಲರಿಗೂ ತಿಳಿಯುವಂತೆ ಮಾಡಬೇಕೆಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ರೈ, ಪೊಳಲಿ ದೇವಸ್ಥಾನಕ್ಕೆ ಕೊಡಿಮರವನ್ನು ನೀಡಲು ಬಿಲ್ಲವ ಸಮುದಾಯ ನಿರ್ಧರಿಸಿದ ಬಳಿಕ ಪ್ರತೀ ಹಂತದಲ್ಲೂ ಅದಕ್ಕೆ ಪೂರಕವಾಗಿ ಸ್ಪಂದಿಸಿದ್ದೇನೆ, ಕ್ಷೇತ್ರದ ಭಕ್ತನಾಗಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷನಾಗಿ, ಅರಣ್ಯ ಸಚಿವನಾಗಿ ತನ್ನಿಂದ ಏನೆಲ್ಲಾ ಆಗಬೇಕಿತ್ತೋ ಆ ಎಲ್ಲಾ ನೆರವನ್ನು ನೀಡಿದ್ದೇನೆ, ಆದರೂ ಅಪಪ್ರಚಾರ ನಡೆಸಲಾಗಿದೆ ಎಂದು ವಿಷಾದಿಸಿದರು.

ರಾಜಕೀಯ ಕಾರಣಗಳಿಗಾಗಿ ತನ್ನ ವಿರುದ್ದ ಇಲ್ಲಸಲ್ಲದ ಆರೋಪಗಳನ್ನು ಮಾಡಿ, ತನ್ನ ವಿರುದ್ದ ಜನತೆಗೆ ತಪ್ಪು ಮಾಹಿತಿ ನೀಡಲಾಗಿದೆ. ಕೊಡಿಮರದ ವಿಚಾರದಲ್ಲಿ ನಾನು ಚಿಕ್ಕ ತಪ್ಪನ್ನೂ ಮಾಡಿಲ್ಲ. ತಪ್ಪು ಮಾಡಿದವರಿಗೆ ದೇವರು ಶಿಕ್ಷೆ ನೀಡಲಿ ಎಂದರು.

ತನ್ನ ಅಧಿಕಾರವಧಿಯಲ್ಲಿ ಪೊಳಲಿ ಮಾತ್ರವಲ್ಲ ಜಿಲ್ಲೆ ಹಾಗೂ ಹೊರಜಿಲ್ಲೆಗಳ ಅನೇಕ ದೇವಸ್ಥಾನಗಳಿಗೆ ಕೊಡಿಮರ ಒದಗಿಸಲು ಹಾಗೂ ಹಲವು ವಿಚಾರಗಳಿಗೆ ಅರಣ್ಯ ಸಚಿವನ ನೆಲೆಯಲ್ಲಿ, ದೇವರ ಮೇಲಿನ ಶ್ರದ್ಧಾಭಕ್ತಿಯಿಂದ ನೆರವು ನೀಡುತ್ತಲೇ ಬಂದಿದ್ದೇನೆ, ಆದರೂ ಅಪಪ್ರಚಾರ ನಡೆದಿರುವುದು ಮನಸ್ಸಿಗೆ ನೋವುತಂದಿದೆ ಎಂದು ರೈ ಹೇಳಿದರು.

ಈ ಸಂದರ್ಭ ಪೊಳಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಅಮ್ಮುಂಜೆ ಗುತ್ತು ಡಾ.ಮಂಜಯ್ಯ ಶೆಟ್ಟಿ, ಮೊಕ್ತೇಸರರಾದ ಉಳಿಪ್ಪಾಡಿ ತಾರಾನಾಥ ಆಳ್ವ, ಪಿ.ಮಾಧವ ಭಟ್, ಜೀರ್ಣೋದ್ದಾರ ಸಮಿತಿ ಸದಸ್ಯರಾದ ಅರುಣ್ ಆಳ್ವ ಉಳಿಪ್ಪಾಡಿಗುತ್ತು , ಡಿ.ಚಂದ್ರಶೇಖರ ಭಂಡಾರಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ ಜೈನ್, ಮಂಜುಳಾ ಮಾಧವ ಮಾವೆ, ಪ್ರಮುಖರಾದ ರಾಮಕೃಷ್ಣ ಆಳ್ವ, ಪದ್ಮನಾಭ ರೈ, ಸಂಜೀವ ಪೂಜಾರಿ, ಮಾಯಿಲಪ್ಪ ಸಾಲ್ಯಾನ್, ಬೇಬಿ ಕುಂದರ್, ಜಗದೀಶ ಕುಂದರ್, ಮಲ್ಲಿಕಾ ಶೆಟ್ಟಿ, ಪ್ರಶಾಂತ್ ಕುಲಾಲ್, ಜಯಂತಿ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಪೊಳಲಿ ದೇವರಿಗೆ ಮಾಜಿ ಸಚಿವ ರೈ ಮೊರೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*