ಬಂಟ್ವಾಳ

ಯುವವಾಹಿನಿ ಬಂಟ್ವಾಳ ಘಟಕದ ಸಾಧನೆ ಶ್ಲಾಘನೀಯ

ಯುವವಾಹಿನಿ ಬಂಟ್ವಾಳ ಘಟಕದ ಸಾಧನೆ ಶ್ಲಾಘನೀಯವಾದುದು ಎಂದು ಯುವವಾಹಿನಿ ಕೇಂದ್ರ ಸಮಿತಿಯ ನಿಕಟಪೂರ್ವಅಧ್ಯಕ್ಷ ಪದ್ಮನಾಭ ಮರೋಳಿ ತಿಳಿಸಿದರು.

ಜಾಹೀರಾತು

ಬಿ.ಸಿ.ರೋಡ್ ಯುವವಾಹಿನಿ ಭವನದಲ್ಲಿಯುವವಾಹಿನಿ (ರಿ) ಬಂಟ್ವಾಳ ಘಟಕದ ೨೦೧೮-೧೯ ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಭೋಧಿಸಿ ಮಾತನಾಡಿದರು.

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದಅಧ್ಯಕ್ಷ ಕೆ.ಸೇಸಪ್ಪಕೋಟ್ಯಾನ್ ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿದರು.
ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ಲೋಕೇಶ್ ಅಲೆತ್ತೂರು ಸಭೆಯಅಧ್ಯಕ್ಷತೆ ವಹಿಸಿದ್ದರು.

ಸಲಹೆಗಾರರಾದ ಬಿ.ತಮ್ಮಯ, ಅಣ್ಣು ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ೨೦೧೮-೧೯ ನೇ ಸಾಲಿನ ಅಧ್ಯಕ್ಷರಾಗಿ ಶಿವಾನಂದ ಎಮ್ ನೇತ್ರತ್ವದಲ್ಲಿತಂಡವು ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಮಾಜಿ ಅಧ್ಯಕ್ಷ ಪ್ರೇಮನಾಥ್ ಕೆ.ಪ್ರಸ್ತಾವನೆ ಮಾಡಿದರು, ನಿಕಟಪೂರ್ವಅಧ್ಯಕ್ಷಅರುಣ್‌ಕುಮಾರ್ ನೂತನ ಪದಾಧಿಕಾರಿಗಳನ್ನು ಸಭೆಗೆ ಪರಿಚಯಿಸಿದರು, ಕಾರ್ಯದರ್ಶಿ ದಿನೇಶ್ ಸುವರ್ಣ ರಾಯಿ ೨೦೧೭-೧೮ ನೇ ಸಾಲಿನ ವಾರ್ಷಿಕ ವರದಿ ಮಂಡಿಸಿದರು, ಉಪನ್ಯಾಸಕ ಚೇತನ್‌ಎಮ್ ಹಾಗೂ ಬಿ.ಶ್ರೀಧರ ಅಮೀನ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.