ಬಂಟ್ವಾಳದಲ್ಲಿ ಭಾರಿ ಮಳೆ, ಕುಸಿದ ಕಿರುಸೇತುವೆ

www.bantwalnews.com – ಸಂಪಾದಕ: ಹರೀಶ ಮಾಂಬಾಡಿ

photo by kishor peraje

ಕಳೆದ ಎರಡು ದಿನಗಳಿಂದ ಸುರಿದ ಗಾಳಿ-ಮಳೆಗೆ ಬಂಟ್ವಾಳ ಪುರಸಭಾ ವ್ಯಾಪ್ತಿಯ 5ನೇ ವಾರ್ಡ್‌ನ ಬಡ್ಡಕಟ್ಟೆ-ಹೊಸಮಾರು ಸಂಪರ್ಕಿಸುವ ಕಿರು ಸೇತುವೆಯೊಂದು ಮಂಗಳವಾರ ಮುರಿದು ಬಿದ್ದಿದೆ. ಸುದ್ದಿ ತಿಳಿದ ಸ್ಥಳೀಯ ಪುರಸಭಾ ಸದಸ್ಯ ಪ್ರವೀಣ್ ಬಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪುರಸಭೆಯ ಮುಖ್ಯಾಧಿಕಾರಿ ರೇಖಾ ಜೆ.ಶೆಟ್ಟಿ, ಇಂಜಿನೀಯರ್ ಡೊಮೆನಿಕ್ ಡಿಮೆಲ್ಲೊ ಅವರು ಕೂಡಾ ಸ್ಥಳಕ್ಕೆ ಆಗಮಿಸಿ, ನಷ್ಟದ ಬಗ್ಗೆ ಅಂದಾಜಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸದಸ್ಯ ಪ್ರವೀಣ್, ಎರಡು ದಿನಗಳ ಮಳೆಯಿಂದ ಈ ಹಳೆ ಸೇತುವೆ ಒಂದು ಭಾಗದ ಆಧಾರ ಸ್ಥಂಭ ಕೊಚ್ಚಿಹೋಗಿ ಕುಸಿದಿದೆ. ಇದಕ್ಕೆ ತಾತ್ಕಾಲಿಕ ಕಾಲುಸಂಕ ನಿರ್ಮಿಸಲು ಈಗಾಗಲೇ ಸಂಬಂಧಿಸಿದವರಿಗೆ ಸೂಚನೆ ನೀಡಲಾಗಿದೆ. ಶಾಶ್ವತ ಕಿರುಸೇತುವೆ ನಿರ್ಮಾಣಕ್ಕೆ ಶಾಸಕರಿಗೂ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಜಾಹೀರಾತು

ಕಳೆದ ಎರಡು ದಿನಗಳಿಂದ ಸುರಿದ ಗಾಳಿ-ಮಳೆಗೆ ಬಂಟ್ವಾಳ ಪುರಸಭಾ ವ್ಯಾಪ್ತಿಯ 5ನೇ ವಾರ್ಡ್ನ ಬಡ್ಡಕಟ್ಟೆ-ಹೊಸಮಾರು ಸಂಪರ್ಕಿಸುವ ಕಿರು ಸೇತುವೆಯೊಂದು ಮಂಗಳವಾರ ಮುರಿದು ಬಿದ್ದಿದ್ದು, ಪುರಸಭಾ ಸದಸ್ಯ ಬಿ.ಪ್ರವೀಣ್ ಪರಿಶೀಲನೆ ನಡೆಸಿದರು.

ಏನಾಗಿದೆ?

ಕಿರು ಸೇತುವೆಯ ಒಂದು ಭಾಗದ ಆಧಾರಸ್ತಂಭ ತೋಡಿನ ನೀರಿನಲ್ಲಿ ಕೊಚ್ಚಿಹೋಗಿದ್ದು ಪರಿಣಾಮ ಕಿರು ಸೇತುವೆ ಕುಸಿದು ಬಿದ್ದಿದ್ದು, ಹೊಸಮಾರು ಹಾಗೂ ಬಡ್ಡಕಟ್ಟೆ ಮಧ್ಯೆ ಸಂಚಾರದ ಸಂಪರ್ಕ ಕೊಂಡಿ ಕಳಚಿದೆ. ಪ್ರತಿನಿತ್ಯ ನೂರಾರು ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ಬೀಡಿ ಕಾರ್ಮಿಕರು ಈ ಸೇತುವೆಯನ್ನು ಅವಲಂಬಿಸುತ್ತಿದ್ದಾರೆ. ಈ ಕಿರು ಸೇತುವೆಯು 1996ರಲ್ಲಿ ನಿರ್ಮಾಣಗೊಂಡಿದ್ದು, ಸುಮಾರು 22ವರ್ಷಗಳ ಕಾಲ ಬಾಳಿಕೆ ಬಂದಿತ್ತು. ಇದೀಗ ಕುಸಿದು ಬಿದ್ದಿದ್ದು, ಈ ಭಾಗದ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗಿದೆ.

ಹಲವೆಡೆ ಹಾನಿ:

ಬಾಳೆಪುಣಿ ಗ್ರಾಮದ ಮುದುಂಗಾರು ಕಟ್ಟೆ ಸಮೀಪದ ದುರ್ಗಲಾಪು ಎಂಬಲ್ಲಿ ನಬಿಸಾ ಎಂಬವರ ಮನೆಯ ತಡೆಗೋಡೆ ಕುಸಿದು ಬಿದ್ದು, ಹಾನಿ ಸಂಭವಿಸಿದೆ.

ಮಳೆಗೆ ಬಂಟ್ವಾಳ, ವಿಟ್ಲ ಭಾಗದ ಹಲವೆಡೆ ಮನೆಗಳಿಗೆ ಹಾನಿಯಾದ ಕುರಿತು ವರದಿಯಾಗಿದೆ. ಬಾಳೆಪುಣಿ ಗ್ರಾಮದ ಮುದುಂಗಾರು ಕಟ್ಟೆ ಸಮೀಪದ ದುರ್ಗಲಾಪು ಎಂಬಲ್ಲಿ ನಬಿಸಾ ಎಂಬವರ ಮನೆಯ ತಡೆಗೋಡೆ ಕುಸಿದು ಬಿದ್ದು, ಹಾನಿ ಸಂಭವಿಸಿದೆ. ಬಾಳೆಪುಣಿ ಗ್ರಾಮ ಪಂ, ಪಿಡಿಒ, ಅದ್ಯಕ್ಷರು, ಹಾಗೂ ಸದಸ್ಯರು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಾಣಿಲದ ಚಂದ್ರಾವತಿ ಹಾಗೂ ದೇವಕಿ ಎಂಬರಿಗೆ ಸೇರಿದ ಮನೆಗಳಿಗೆ ಹಾನಿ, ಪೆರುವಾಯಿ ಅಬ್ಬಾಸ್ ಅಲಿ ಎಂಬವರ ಮನೆಗೆ ಹಾನಿ, ಕನ್ಯಾನದಲ್ಲಿ ಯಮುನಾ ಎಂಬವರಿಗೆ ಸೇರಿದ ಮನೆಗೆ ಹಾನಿಯಾಗಿದ್ದು, ನಷ್ಟ ಉಂಟಾಗಿದೆ.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳದಲ್ಲಿ ಭಾರಿ ಮಳೆ, ಕುಸಿದ ಕಿರುಸೇತುವೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*