ಬಂಟ್ವಾಳ

ಏರಮಲೆಯಲ್ಲಿ 21ರಂದು ವಿಶ್ವ ಯೋಗದಿನಾಚರಣೆ, ಶಾಸಕ ರಾಜೇಶ್ ನಾಯ್ಕ್ ಭಾಗಿ

ನರಿಕೊಂಬು ಗ್ರಾಮದ ಬೋಳಂತೂರು ಏರಮಲೆಯ ಭಗವಾನ್ ಶ್ರೀ ಕೋದಂಡರಾಮ ಭಜನಾ ಮಂದಿರ ಮತ್ತು ಶ್ರೀ ಯೋಗನಿಧಿ ಪತಂಜಲಿ ಪ್ರತಿಷ್ಠಾನ ಆಶ್ರಯದಲ್ಲಿ ವಿಶ್ವ ಯೋಗ ದಿನ ಆಚರಣೆ ಜೂನ್ 21ರಂದು ಬೆಳಗ್ಗೆ 5.15 ಕ್ಕೆ ಏರಮಲೆಯ ಸಮದಾಯ ಭವನದಲ್ಲಿ ನಡೆಯಲಿದೆ.

ಜಾಹೀರಾತು

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವ ಸಮಾರಂಭವನ್ನು ತಾಪಂ ಸದಸ್ಯೆ ಗಾಯತ್ರಿ ರವೀಂದ್ರ ಸಫಲ್ಯ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಗ್ರಾಪಂ ಅಧ್ಯಕ್ಷ ಯಶೋಧರ ಕರ್ಬೆಟ್ಟು ವಹಿಸುವರು. ಯೋಗ ಶಿಕ್ಷಕ ಸದಾಶಿವ ನಾಯಕ್ ಪ್ರಧಾನ ಉಪನ್ಯಾಸ ಮಾಡುವರು. ಯೋಗ ಶಿಕ್ಷಕ ಡಾ. ರಘುವೀರ ಅವಧಾನಿ, ಪತ್ರಕರ್ತರಾದ ರಾಜಾ ಬಂಟ್ವಾಳ, ಹರೀಶ ಮಾಂಬಾಡಿ, ಗ್ರಾಪಂ ಸದಸ್ಯರಾದ ಕಿಶೋರ್ ಕುಮಾರ್ ಶೆಟ್ಟಿ, ಮಾಧವ ಕರ್ಬೆಟ್ಟು, ರಾಜೀವಿ ಕೃಷ್ಣಪ್ಪ ಪೂಜಾರಿ, ತ್ರಿವೇಣಿ ಮೋನಪ್ಪ ಪೂಜಾರಿ ಉಪಸ್ಥಿತರಿರುವರು, 5.15 ರಿಂದ 5.45 ರವರೆಗೆ ನಿತ್ಯ ಯೋಗಾಭ್ಯಾಸಿಗಳಿಂದ ಸಾಮೂಹಿಕ ಯೋಗಾಭ್ಯಾಸ, 5.45 ರಿಂದ 6 ರವರೆಗೆ ಯೋಗಾಸನ ಪ್ರದರ್ಶನ ಬಳಿಕ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ