ಬಂಟ್ವಾಳ

ಕಡೇಶಿವಾಲಯದಲ್ಲಿ 32 ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ

ಸರಕಾರದ ಯೋಜನೆಯನ್ನು ತ್ವರಿತಗತಿಯಲ್ಲಿ ಮಾಹಿತಿ ನೀಡಿ, ಪ್ರಗತಿಯಲ್ಲಿ ಸಹಕರಿಸಿ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.

ಜಾಹೀರಾತು

ಬರಿಮಾರು ಗ್ರಾಮಗಳ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣಾ ಸಮಾರಂಭ ಕಡೇಶಿವಾಲಯದ ..ಜಿ.ಪಂ.ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

32 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಮಾತನಾಡಿದ ಶಾಸಕರು, ಸರಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ತ್ವರಿತಗತಿಯಲ್ಲಿ ಯೋಜನೆಗಳನ್ನು ಜನರಿಗೆ ತಲುಪಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಗೋಳ್ತಮಜಲು ಜಿಲ್ಲಾ ಪಂಚಾಯತ್ ಸದಸ್ಯೆ ಕಮಲಾಕ್ಷಿ ಕೆ. ಪೂಜಾರಿ ಮುಂದಿನ ದಿನಗಳಲ್ಲಿ ಶಾಸಕರ ಜೊತೆಗೂಡಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ನೆರವಾಗುದಾಗಿ ಭರವಸೆಯಿತ್ತರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಡೇಶಿವಾಲಯ ಗ್ರಾಮ ಪಂಚಾಯತ್ ಸದಸ್ಯೆ ಶ್ಯಾಮಲಾ ಶೆಟ್ಟಿ ಚಿನ್ನಯಕಟ್ಟೆ, ಗ್ರಾಮಸ್ಥರ ಪರವಾಗಿ ಅಭಿನಂದನೆಯನ್ನು ಸಲ್ಲಿಸಿದರು.

ಕಡೇಶಿವಾಲಯ ಗ್ರಾಮಸ್ಥರ ಬಹುಕಾಲದ ಬೇಡಿಕೆಯಾಗಿದ್ದ ಮುಖ್ಯರಸ್ತೆ ದುರಸ್ತಿಯ ವಿಚಾರವಾಗಿ ತಕ್ಷಣವೇ ಸ್ಪಂದಿಸಿದ ಶಾಸಕರು, ಆದಷ್ಟು ಬೇಗ ಕೆಲಸ ಆರಂಭಿಸಲು ಸೂಚಿಸಿದರು.

ಗ್ರಾಮ ಪಂಚಾಯತ್ಉಪಾಧ್ಯಕ್ಷ ಸುರೇಂದ್ರ ರಾವ್, ವ್ಯ.ಸೇ..ಬ್ಯಾಂಕ್ಅಧ್ಯಕ್ಷರಾದ ವಿದ್ಯಾಧರ ರೈ ಪೆರ್ಲಾಪು, ಗ್ರಾಮಕರಣಿಕರಾದ ಬಸಪ್ಪ, ಪಂಚಾಯತ್ ಸದಸ್ಯರಾದ ಸನತ್ ಆಳ್ವ, ಸುರೇಶ್ ಪೂಜಾರಿ ಕನ್ನೊಟ್ಟು, ಸುರೇಶ್ ಬನಾರಿ, ಹರಿಶ್ಚಂದ್ರ ಕಾಡಬೆಟ್ಟು, ಸರೋಜ, ಸೇಸಮ್ಮ, ಲಲಿತಾ ಮುಂತಾದವರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.