ಬುಧವಾರ ಬೆಳಗ್ಗಿನಿಂದಲೇ ಬಂಟ್ವಾಳ ತಾಲೂಕಿನಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಕುರಿಯಾಳ ಗ್ರಾಮದ ವಿಶ್ವನಾಥ ಬೆಳ್ಚಡ ಎಂಬವರ ಮನೆ ಕುಸಿದುಬಿದ್ದಿದೆ. ಕುರಿಯಾಳದ ಆನೆಕೆರೆ ಎಂಬಲ್ಲಿರುವ ವಿಶ್ವನಾಥ ಬೆಳ್ಚಡ ಒಂಟಿಯಾಗಿ ವಾಸಿಸುತ್ತಿದ್ದು, ಸಂಬಂಧಿಕರ ಮನೆಗೆ ತೆರಳಿದ್ದ ಕಾರಣ ಪ್ರಾಣಾಪಾಯದಿಂದ ಪಾರಾದರು.
ಜಾಹೀರಾತು
ಬುಧವಾರ ಬೆಳಗ್ಗೆ ಘಟನೆ ನಡೆದಿದ್ದು, ಸುಮಾರು 1.5 ಲಕ್ಷಕ್ಕೂ ಅಧಿಕ ಮೊತ್ತದ ನಷ್ಟ ಉಂಟಾಗಿರುವುದಾಗಿ ಅಂದಾಜಿಸಲಾಗಿದೆ. ಕುರಿಯಾಳ ಗ್ರಾಮಕರಣಿಕ ಅಮೃತಾಂಶು ಕೆ.ಎಸ್, ಗ್ರಾಮಸಹಾಯಕ ಸಂದೀಪ್ ಕೆ, ಪಂಚಾಯತ್ ಸದಸ್ಯರಾದ ಸುಧಾಕರ ಶೆಟ್ಟಿ ಭೇಟಿ ನೀಡಿ ಬೆಳ್ಚಡ ಅವರಿಗೆ ಪುನರ್ವಸತಿ ಕಲ್ಪಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಭಾರಿ ಮಳೆಗೆ ಕುಸಿದ ಮನೆ"