ಬಂಟ್ವಾಳ

ಎಟಿಎಂ ಜಖಂ, ಕಳವಿಗೆ ವಿಫಲ ಯತ್ನ

ಸಿಂಡಿಕೇಟ್ ಬ್ಯಾಂಕ್ ನ ಪಾಣೆಮಂಗಳೂರು ಶಾಖೆಗೊಳಪಟ್ಟ ಎಟಿಎಂ ಯಂತ್ರವನ್ನು ಜಖಂಗೊಳಿಸಿ ನಗದು ಕಳವಿಗೆ ಯತ್ನಿಸಿದ ಘಟನೆ ಗುರುವಾರ ನುಸುಕಿನ ಜಾವ ನಡೆದಿದೆ‌ .

ಜಾಹೀರಾತು

ಬೆಳಗ್ಗಿನ ಜಾವ 4 ಗಂಟೆಗೆ ಎಟಿಎಮ್ ನಲ್ಲಿ ಸೈರನ್ ಮೊಳಗುತ್ತಿರುವ ಬಗ್ಗೆ ಮಾಹಿತಿ ಪಡೆದ ಬ್ಯಾಂಕಿನ ಶಾಖಾ ಪ್ರಬಂಧಕ ಸ್ಥಳಕ್ಕಾಗಮಿಸಿದಾಗ ಎಟಿಎಮ್ ನ ರೂಮಿನ  ಬಾಗಿಲು ತೆರೆದಿದ್ದು, ಬಳಿಕ ಪರಿಶೀಲಿಸಿದಾಗ ಎಟಿಎಂನ ಮೊನಿಟರ್ ಹಾಗೂ ಇತರ ಭಾಗಗಳು ಜಖಂ ಅಗಿತ್ತು . ಬಳಿಕ ಎಟಿಎಮ್ ನ ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಅಪರಿಚಿತ ವ್ಯಕ್ತಿಯೊಬ್ಬ ಆಯುಧದಿಂದ ಮೆಷಿನ್ ನನ್ನು ಜಖಂಗೊಳಿಸುವ ದೃಶ್ಯ ದಾಖಲಾಗಿದೆ. ಸುದ್ದಿ ತಿಳಿದ ಬಂಟ್ವಾಳ ನಗರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಎಸ್ ಐ ಹರೀಶ್ ಮತ್ತವರ ಸಿಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.  ಎಟಿಎಮ್ ನಿಂದ ನಗದು ಅಗಲೀ ಇತರ ಯಾವುದೇ ಸೊತ್ತುಗಳು ಕಳವಾಗಿರುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಮುಂದಿನ ತನಿಖೆ ನಡೆಯುತ್ತಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ