ಬಂಟ್ವಾಳ

ಪ್ರಾಕೃತಿಕ ವಿಕೋಪ, ಪ್ರಗತಿ ಪರಿಶೀಲನಾ ಸಭೆ ಮುಂದಕ್ಕೆ

ಸಚಿವ ಯು.ಟಿ.ಖಾದರ್ ಅಧ್ಯಕ್ಷತೆಯಲ್ಲಿ ಜೂನ್ 23ರಂದು  ಬಂಟ್ವಾಳ ತಾಲೂಕು ಪಂಚಾಯತ್ ನ  ಎಸ್. ಜಿ. ಎಸ್. ವೈ ಸಭಾಂಗಣದಲ್ಲಿ ಆಯೋಜಿಸಲಾದ  ಪ್ರಾಕೃತಿಕ ವಿಕೋಪ ಮತ್ತು  ತಾಲೂಕಿನ ಪ್ರಗತಿ ಪರಿಶೀಲನಾ ಸಭೆಯನ್ನು  ಹಠಾತ್ತನೆ ರದ್ದುಗೊಳಿಸಲಾಗಿದೆ.

ಸಭೆಯನ್ನು  ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ತಾಪಂ ನ ಕಚೇರಿ ಪ್ರಕಟಣೆ ತಿಳಿಸಿದೆ.

ಜಾಹೀರಾತು

ಸಭೆ ನಿಗದಿ ಪಡಿಸಿದ ಕುರಿತ ಪ್ರಕಟಣೆ  ತಾಲೂಕು ಪ್ರಭಾರ ತಹಶೀಲ್ದಾರರಿಂದ ಎಲ್ಲಾ ಇಲಾಖಾಧಿಕಾರಿಗಳಿಗೆ ರವಾನೆಯಾಗಿತ್ತು. ಇದಾದ ಬಳಿಕ ಮಧ್ಯಾಹ್ನದ ಹೊತ್ತಿಗೆ ಶಾಸಕರ ಹೆಸರನ್ನು ಸಭೆಗೆ ಆಹ್ವಾನಿಸಿರುವ ಪ್ರತ್ಯೇಕ ಸಭಾ ಕಲಾಪದ ನೊಟೀಸ್ ಸ್ಥಳೀಯ ಮಾಧ್ಯಮ ಪ್ರತಿನಿಧಿಗಳು ಸಹಿತ ಇಲಾಖಾಧಿಕಾರಿಯವರಿಗೆ ಈ ಮೇಲ್ ಮೂಲಕ ರವಾನೆಯಾಯಿತು. ಸಂಜೆಯ ವೇಳೆ ಹಠಾತ್ತನೆ ಈ ಸಭೆ ರದ್ದುಗೊಂಡಿರುವ ಕುರಿತ ಮತ್ತೊಂದು ನೊಟೀಸ್ ತಾಪಂ ಕಚೇರಿಯಿಂದ ರವಾನೆಯಾಗಿದೆ. ಬುಧವಾರ ಶಾಸಕ ರಾಜೇಶ್ ನಾಯ್ಕ್ ಅವರ ಅಧ್ಯಕ್ಷತೆಯಲ್ಲಿ ಪ್ರಾಕೃತಿಕ ವಿಕೋಪ ಹಾಗೂ ಅಭಿವೃದ್ದಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆ ನಿಗದಿ ಪಡಿಸಿದ್ದರು. ಮೂರು ತಿಂಗಳಿನಿಂದ  ವೇತನ ಸಿಗದೆ ಶಿಕ್ಷಕರು ತೊಂದರೆ ಅನುಭವಿಸುತ್ತಿರುವ ಹಿನ್ನಲೆಯಲ್ಲಿ ಶಿಕ್ಷಕರ ಮನವಿಯ ಮೇರೆಗೆ ಮತ್ತು ನೈನಾಡು ಕಾಲೇಜಿನ ಸಮಸ್ಯೆಯೊಂದನ್ನು ನಿವಾರಿಸುವ ನಿಟ್ಟಿನಲ್ಲಿ ತುರ್ತಾಗಿ ಮುಖ್ಯಮಂತ್ರಿಯವರನ್ನು ಭೇಟಿಯಾಗಲು ಶಾಸಕ ಬೆಂಗಳೂರಿಗೆ ತೆರಳಿದ್ದರಿಂದ ಅಂದಿನ ಈ ಸಭೆ ರದ್ದು ಪಡಿಸಲಾಗಿತ್ತು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ