ಮೂಲಸೌಕರ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ: ರಾಜೇಶ್ ನಾಯ್ಕ್

ಜನರ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಬದ್ಧನಾಗಿದ್ದು, ಪ್ರಯತ್ನಗಳನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ. ನನ್ನ ಇತಿಮಿತಿಗಳಲ್ಲಿ ಜನರ ಆಶೋತ್ತರ ಈಡೇರಿಸಲು ಪ್ರಯತ್ನಿಸುತ್ತೇನೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.

ಜಾಹೀರಾತು

ಮೊಡಂಕಾಪುವಿನಲ್ಲಿರುವ ಭಾರತೀಯ ಸೇನೆಯ ಯೋಧ ದಿ. ಐಸಾಕ್ ಮೆಂಡೋನ್ಸಾ ಅವರ ಪತ್ನಿ ಲೀನಾ ಐಸಾಕ್ ಮೆಂಡೋನ್ಸಾ ಮನೆಯಲ್ಲಿ ಬಿಜೆಪಿ ರೈತಮೋರ್ಚಾ ಕಾರ್ಯದರ್ಶಿ ಜೆರಾಲ್ಡ್ ಡಿಸೋಜ ನೇತೃತ್ವದಲ್ಲಿ ಸ್ಥಳೀಯ ಅಭಿಮಾನಿಗಳು ಶುಕ್ರವಾರ ಸಂಜೆ ಏರ್ಪಡಿಸಿದ ಸನ್ಮಾನ, ಅಭಿನಂದನೆ ಸ್ವೀಕರಿಸಿದ ಬಳಿಕ ಮಾತನಾಡಿದ ಶಾಸಕರು, ಹಾರ, ಸನ್ಮಾನಗಳು ಜವಾಬ್ದಾರಿಯನ್ನು ಹೆಚ್ಚಿಸುತ್ತವೆ. ಜನರ ಕೆಲಸ ಕಾರ್ಯಗಳನ್ನು ಮುತುವರ್ಜಿ ವಹಿಸಿ ನಿರ್ವಹಿಸುವುದು ತನ್ನ ಕರ್ತವ್ಯ ಎಂದು ಹೇಳಿದರು.

ಲೀನಾ ಅವರ ಪತಿ ಐಸಾಕ್ ಮೆಂಡೋನ್ಸಾ  ಅವರ ಪತಿ ಸೈನ್ಯದಲ್ಲಿದ್ದು, ನಿಧನ ಹೊಂದಿದ್ದಾರೆ. ದೇಶಕ್ಕಾಗಿ ದುಡಿಯುವ ಯೋಧರ ಮನೆಯವರು ನೆಮ್ಮದಿಯಿಂದ ಜೀವನ ಸಾಗಿಸುವಂತೆ ಮಾಡುವುದು ಆಡಳಿತದ ಕರ್ತವ್ಯವೂ ಹೌದು ಎಂದು ಈ ಸಂದರ್ಭ ಶಾಸಕರು ಅಭಿಪ್ರಾಯಪಟ್ಟರು.

ಬೀದಿದೀಪ, ಕುಡಿಯುವ ನೀರಿನ ಸಹಿತ ಯಾವುದೇ ಸೌಕರ್ಯಗಳು ಇದುವರೆಗೆ ತಮ್ಮ ಭಾಗಕ್ಕೆ ಒದಗಿಬಂದಿಲ್ಲ ಎಂದು ಗಮನ ಸೆಳೆದ ಸ್ಥಳೀಯರು, ಈ ಕುರಿತು ಗಮನ ಹರಿಸುವಂತೆ ಶಾಸಕರಿಗೆ ಮನವಿಪತ್ರಗಳನ್ನು ನೀಡಿದರು.

ಈ ಸಂದರ್ಭ ಬಿಜೆಪಿ ಬಂಟ್ವಾಳ ಕ್ಷೇತ್ರಾಧ್ಯಕ್ಷ ಬಿ.ದೇವದಾಸ ಶೆಟ್ಟಿ, ಸ್ಥಳೀಯ ಪ್ರಮುಖರಾದ ಹೆರಾಲ್ಡ್ ಮಿನೇಜಸ್, ಕಿರಣ್, ಮ್ಯಾಕ್ಸಿಂ ಲೋಬೊ ಮತ್ತಿತರರು ಉಪಸ್ಥಿತರಿದ್ದರು. ಚಂದ್ರಹಾಸ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುನಿಲ್ ಲೂವಿಸ್ ವಂದಿಸಿದರು. ಈ ಸಂದರ್ಭ ಹಾಜರಿದ್ದ ಸ್ಥಳೀಯರು ಹಲವು ಅಹವಾಲುಗಳನ್ನು ಶಾಸಕರ ಮುಂದಿಟ್ಟರು.

 

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮೂಲಸೌಕರ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ: ರಾಜೇಶ್ ನಾಯ್ಕ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*