ಬಂಟ್ವಾಳ

ಆಲ್ ದಿ ಬೆಸ್ಟ್ – ಚೆಸ್ ಪಟು ಯಶಸ್ವಿ ಅಂತಾರಾಷ್ಟ್ರೀಯ ಪಂದ್ಯಾವಳಿಗೆ ಶುಭ ಕೋರಿದ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ ತಾಲೂಕಿನ ಕಡೇಶಿವಾಲಯದಲ್ಲಿ 10ನೇ ತರಗತಿಯಲ್ಲಿ ಕಲಿಯುತ್ತಿರುವ ತಿಮ್ಮಪ್ಪ ಮೂಲ್ಯ – ಯಶೋಧಾ ದಂಪತಿಯ ಪುತ್ರಿ ಯಶಸ್ವಿ ಇಂಗ್ಲೆಂಡ್ ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಚೆಸ್ ಪಂದ್ಯಾಕೂಟಕ್ಕೆ ಪೂರ್ವಭಾವಿಯಾಗಿ ನವದೆಹಲಿಗೆ ಸೋಮವಾರ ತೆರಳುತ್ತಿದ್ದು ಈ ಸಂದರ್ಭ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಆಕೆಗೆ ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದರು.

ಜಾಹೀರಾತು

ಈ ಸಂದರ್ಭ ಮಾತನಾಡಿದ ಶಾಸಕ , ಯಶಸ್ವಿ ಚೆಸ್ ನಲ್ಲಿ ಪ್ರಶಸ್ತಿ ಗೆದ್ದು ಯಶಸ್ವಿಯಾಗಿ ಮರಳಿ ಬರಲಿ ಎಂದು ಶುಭ ಹಾರೈಸಿ, ತನ್ನ ವೈಯಕ್ತಿಕ ನೆಲೆಯಲ್ಲಿ ನೆರವು ನೀಡಿ, ಶುಭಾಶಯ ಹೇಳಿದರು.

ಯಶಸ್ವಿಯ ತಂದೆ ತಿಮ್ಮಪ್ಪ ಮೂಲ್ಯ, ಪ್ರಮುಖರಾದ ರಾಧಾಕೃಷ್ಣ ಅಡ್ಯಂತಾಯ, ರೊನಾಲ್ಡ್ ಡಿಸೋಜ, ಪ್ರಭಾಕರ ಪ್ರಭು, ರಂಜಿತ್ ಮೈರ, ಪುರುಷೋತ್ತಮ ಶೆಟ್ಟಿ ವಾಮದಪದವು, ಗಣೇಶ್ ರೈ ಮಾಣಿ, ರಮಾನಾಥ ರಾಯಿ ಉಪಸ್ಥಿತರಿದ್ದರು.

ಶ್ರವಣಶಕ್ತಿಯ ಕೊರತೆ ಇರುವ, ಮಾತನಾಡಲು ಕಷ್ಟಪಡುವ ಆದರೆ ಅದ್ಭುತ ಏಕಾಗ್ರತೆಯನ್ನು ಹೊಂದಿರುವ ಯಶಸ್ವಿ ಸತ್ಯಪ್ರಸಾದ್ ಕೋಟೆ ಅವರು ಪುತ್ತೂರಿನಲ್ಲಿ ಆರಂಭಿಸಿರುವ ಜೀನಿಯಸ್ ಚೆಸ್ ಸ್ಕೂಲ್‌ನಲ್ಲಿ ಚೆಸ್ ಕಲಿಯುತ್ತಿರುವ ಈಕೆ, ಅಂತಾರಾಷ್ಟ್ರೀಯ ಮಟ್ಟದ ಫಿಡೆ ರೇಟಿಂಗ್ ನಲ್ಲಿ ೧೩೦೦ವರೆಗೆ ತಲುಪಿದ್ದಾಳೆ. ಚೆಸ್ ಅಕಾಡೆಮಿಯಲ್ಲಿ ಸತತ ಮೂರು ವರ್ಷಗಳ ಕಾಲ ತರಬೇತಿ ಪಡೆದಿದ್ದು, ಕಡೇಶಿವಾಲಯದ ಶಾಲೆಯ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ. ಜುಲೈ 6ರಿಂದ 16ರವರೆಗೆ ಶ್ರವಣಶಕ್ತಿಯ ಕೊರತೆ ಇರುವ ಮಹಿಳೆಯರಿಗಾಗಿ ಇರುವ ಅಂತಾರಾಷ್ಟ್ರೀಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಲು ಇಂಗ್ಲೆಂಡ್ ಗೆ ತೆರಳಲಿರುವ ಈಕೆ ಇದಕ್ಕೆ ಪೂರ್ವಭಾವಿ ತಯಾರಿಗೋಸ್ಕರ ನವದೆಹಲಿಗೆ ತೆರಳಲಿದ್ದಾಳೆ.

ಯಶಸ್ವಿ ಯಶೋಗಾಥೆ ಬಗ್ಗೆ ಇನ್ನಷ್ಟು ಮಾಹಿತಿಗೆ ಕ್ಲಿಕ್ ಮಾಡಿರಿ

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.