ಬಂಟ್ವಾಳ

ತಾಲೂಕು ಹಾಲು ಉತ್ಪಾದಕ ಸಹಕಾರ ಸಂಘ ಅಧ್ಯಕ್ಷ, ಸಿಇಒಗಳ ಸಮಾಲೋಚನಾ ಸಭೆ

ದಕ್ಷಿಣಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟಕ್ಕೆ ಸಂಯೋಜನೆ ಗೊಂಡಿರುವ ಬಂಟ್ವಾಳ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ  ಅಧ್ಯಕ್ಷರು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಸಮಾಲೋಚನಾ ಸಭೆ ಅಧ್ಯಕ್ಷರಾದ ರವಿರಾಜ ಹೆಗ್ಡೆ ಅಧ್ಯಕ್ಷತೆಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸಭಾಭವನ ಗಾಣದಪಡ್ಪು ಬಿಸಿ ರೋಡ್ ನಲ್ಲಿ ನಡೆಯಿತು.

ಜಾಹೀರಾತು

ಕಾರ್ಯನಿರ್ವಾಹಕ ನಿರ್ದೇಶಕ ಡಾ. ಬಿ. ಯು.  ಸತ್ಯನಾರಾಯಣ, ನಿರ್ದೇಶಕ ಸುಚರಿತ ಶೆಟ್ಟಿ, ಮಹಿಳಾ ವಿಭಾಗದ ನಿರ್ದೇಶಕಿ ವೀಣಾ ರೈ, ಒಕ್ಕೂಟದ ಶೇಖರಣಾ ವಿಭಾಗದ ವ್ಯವಸ್ಥಾಪಕ ಡಾ. ನಿತ್ಯಾನಂದ ಭಕ್ತ, ದ.ಕ.ಹಾಲು ಒಕ್ಕೂಟದ ಡೈರಿ ವಿಭಾಗದ ವ್ಯವಸ್ಥಾಪಕ ಶಿವಶಂಕರ್ ಸ್ವಾಮಿ ಉಪಸ್ಥಿತರಿದ್ದರು. ಈ ಸಂದರ್ಭ ಬಂಟ್ವಾಳ ತಾಲೂಕಿನ ಉತ್ತಮ ಸಂಘಗಳಿಗೆ ಪ್ರಶಸ್ತಿ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ  ಹೈನುಗಾರರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮ ನಡೆಯಿತು.  ಒಕ್ಕೂಟದ ನಿರ್ದೇಶಕ ಡಾ. ಕೃಷ್ಣ ಭಟ್ ಸ್ವಾಗತಿಸಿದರು. ಒಕ್ಕೂಟದ ವಿಸ್ತರಣಾಧಿಕಾರಿ ಜಾನೆಟ್ ರೋಸಾರಿಯೋ ವಂದಿಸಿದರು. ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಿಸ್ತರಣಾಧಿಕಾರಿ ಜಗದೀಶ .ಎ. ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ