ಗಾಳಿ-ಮಳೆಗೆ ಫರಂಗಿಪೇಟೆ ಸಮೀಪದ ಕೊಡ್ಮಾಣ್ ಗ್ರಾಮದ ಕೊಟ್ಟಿಂಜೆ ಎಂಬಲ್ಲಿ ಗುಡ್ಡವೊಂದು ಜರಿದು ಬಿದ್ದು, ಅಮ್ಮೆಮಾರ್-ಮಲ್ಲೂರು ರಸ್ತೆ ಸಂಪರ್ಕ ಕಡಿತ ಉಂಟಾಗಿ, ಜನಜೀವನ ಅಸ್ತವ್ಯಸ್ತಗೊಂಡಿತು. ಈ ಸಂದರ್ಭ ಅಲ್ಲಿ ಯಾರೂ ಇಲ್ಲದ ಕಾರಣ ಪ್ರಾಣಾಪಾಯಗಳು ಸಂಭವಿಸಲಿಲ್ಲ.
ಜಾಹೀರಾತು
ಬುಧವಾರ ಸುರಿದ ಜಡಿಮಳೆಗೆ ಪೂರ್ತಿ ಮಣ್ಣು ಸಡಿಲಗೊಂಡು ಪಕ್ಕದ ರಸ್ತೆಗೆ ಕುಸಿದು ಬಿದ್ದಿದೆ. ಪರಿಣಾಮ ಗುಡ್ಡದ ಅಡಿಭಾಗದಲ್ಲಿ ನಿರ್ಮಾಣಗೊಂಡಿದ್ದ ಮೂರು ಶೆಡ್ಗಳು ನೆಲಸಮವಾಗಿದೆ. ಮಣ್ಣು ಶೆಡ್ಡಿನ ಮೇಲೆಯೇ ಬಿದ್ದು, ರಸ್ತೆಯನ್ನು ಕೂಡಾ ಆವರಿಸಿದ್ದು, ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಸುದ್ದಿ ತಿಳಿದ ಸ್ಥಳೀಯ ಪಂಚಾಯತ್ ಜೆಸಿಬಿ ಮೂಲಕ ಮಣ್ಣನ್ನು ತೆರವುಗೊಳಿಸಿ, ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕೊಡ್ಮಾಣ್ ಗುಡ್ಡ ಜರಿತ, ಶೆಡ್ ಗಳು ನೆಲಸಮ"
Be the first to comment on "ಕೊಡ್ಮಾಣ್ ಗುಡ್ಡ ಜರಿತ, ಶೆಡ್ ಗಳು ನೆಲಸಮ"