ಬಂಟ್ವಾಳ, ಬಿ.ಸಿ.ರೋಡಿನಲ್ಲಿ ಕೃತಕ ನೆರೆ, ಮನೆಗಳಿಗೆ ನುಗ್ಗಿದ ನೀರು

www.bantwalnews.com 

Editor: Harish Mambady

ಜಾಹೀರಾತು

ಮಳೆಗಾಲಕ್ಕೆ ಮುನ್ನ ಎಲ್ಲೆಲ್ಲಿ ಚರಂಡಿ ಇದೆಯೋ ಅಲ್ಲೆಲ್ಲ ಹೂಳೆತ್ತದ ಪರಿಣಾಮವನ್ನು ಬುಧವಾರ ಬಂಟ್ವಾಳ ಪುರಸಭಾ ವ್ಯಾಪ್ತಿಯ ಜನತೆ ಅನುಭವಿಸಬೇಕಾಯಿತು. ಬಂಟ್ವಾಳ, ಬಿ.ಸಿ.ರೋಡಿನ ರಸ್ತೆ, ಮನೆಗಳ ಪಕ್ಕ ಹೊಳೆಯಂತೆ ನೀರು ಹರಿದಿದ್ದು, ಧಾರಾಕಾರ ಮಳೆಯ ಪರಿಣಾಮ ನೂರಾರು ಮಂದಿ ಸಂಕಷ್ಟಕ್ಕೀಡಾದರು.

ಬಿ.ಸಿ.ರೋಡಿನ ಅಪೂರ್ವ ಜ್ಯುವೆಲರ್ಸ್ ಎದುರು ಬಸ್ ನಿಲ್ದಾಣ ಹಿಂಬದಿ ಇರುವ ರಸ್ತೆಯುದ್ದಕ್ಕೂ ನೀರು ನಿಂತು ಜನರು ಸಂಕಷ್ಟ ಅನುಭವಿಸಿದರು.

ಕಳೆದ ಕೆಲ ದಿನಗಳಿಂದ ಸುರಿತ್ತಿರುವ ಮಳೆ ಬುಧವಾರ ತೀವ್ರಗೊಂಡಿದ್ದು, ಬಂಟ್ವಾಳ ಮತ್ತು ಬಿ.ಸಿ.ರೋಡಿನ ಹಲವೆಡೆ ಕೃತಕ ನೆರೆ ಕಾಣಿಸಿಕೊಂಡಿದೆ. ಬಿ.ಸಿ.ರೋಡಿನ ಬಸ್ ನಿಲ್ದಾಣದ ಹಿಂಬದಿಯ ರಸ್ತೆ ಸಂಪೂರ್ಣ ಹೊಳೆಯಂತಾಗಿದ್ದು, ಮೊಣಕಾಲಿನವರೆಗೆ ನೀರು ತುಂಬಿದೆ. ಇದರಿಂದ ಆಸುಪಾಸಿನ ಸುಮಾರು ನಲ್ವತ್ತಕ್ಕೂ ಅಧಿಕ ಮಳಿಗೆ, ಮನೆಗಳಿಗೆ ತೆರಳುವವರು ತೊಂದರೆ ಅನುಭವಿಸುವಂತಾಗಿದೆ. ಬಂಟ್ವಾಳ ಪುರಸಭಾ ವ್ಯಾಪ್ತಿಯ ಬಿ.ಮೂಡ ಮತ್ತು ಅಮ್ಟಾಡಿ ಗ್ರಾಪಂ ವ್ಯಾಪ್ತಿಗೊಳಪಡುವ ಭಂಡಾರಿಬೆಟ್ಟು ಎಂಬಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ.

ಮಳೆ ನೀರು ಸರಾಗವಾಗಿ ಹರಿದುಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಕಾರಣ  ಈ ಸಮಸ್ಯೆ ಉದ್ಭವವಾಗಿದೆ. ವಸತಿ ಸಮುಚ್ಛಯಗಳ ಪಕ್ಕ ನೀರು ಕೆರೆಯಂತೆ ಕಂಡುಬಂದಿತ್ತು. ಬಿ.ಸಿ.ರೋಡಿನಿಂದ ಬಂಟ್ವಾಳ ಬೈಪಾಸ್ ಕಡೆಗೆ ಹೋಗುವ ರಸ್ತೆಯ ಪಕ್ಕ ಈ ಸಮಸ್ಯೆ ಉದ್ಭವವಾಗಿದ್ದು, ಅಲ್ಲಿಂದ ಸಂಪರ್ಕಿಸುವ ಹಲವಾರು ಮನೆಗಳಿಗೆ ತೆರಳುವವರು ತೀವ್ರ ತೊಂದರೆ ಅನುಭವಿಸಿದರು. ಶಾಲೆಯಿಂದ ಮರಳಿ ಬರುವ ಮಕ್ಕಳು ತಮ್ಮ ಮನೆಗಳಿಗೆ ತೆರಳಲು ಪ್ರಯಾಸಪಡುವ ಸ್ಥಿತಿ ಉದ್ಭವವಾಯಿತು.

ಮೇಲ್ಕಾರ್ ಸಹಿತ ಹಲವೆಡೆ ಮಳೆಯಿಂದ ಸಮಸ್ಯೆಗಳು ಉದ್ಭವವಾಗಿವೆ.. ಪೂಂಜರಕೋಡಿ ಚಂದ್ರಶೇಖರ ಆಚಾರ್ಯ ಮನೆ ಬಳಿ ಗುಡ್ಡ ಜರಿದು ಬೈಕ್ ಗೆ ಹಾನಿಯಾಗಿದೆ. ಬಿ.ಸಿ.ರೋಡ್ ಸ್ಟೇಟ್ ಬ್ಯಾಂಕ್ ಎದುರು ಎಂದಿನಂತೆಯೇ ನೀರು ನಿಂತಿದ್ದರೆ, ಫ್ಲೈಓವರ್ ಅಡಿಯೂ ಕೊಳದಂಥ ಸ್ಥಿತಿ ಉದ್ಭವವಾಗಿತ್ತು. ಬಿ.ಸಿ.ರೋಡಿನ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದರೆ, ರಸ್ತೆ ಪಕ್ಕ, ಬಸ್ ನಿಲ್ದಾಣ ಪಕ್ಕ ಕೆಸರು ರಾಡಿಯಾಗಿದ್ದು, ಪ್ರಯಾಣಿಕರು ನಿಲ್ಲಲು ಪ್ರಯಾಸಪಡಬೇಕಾಯಿತು.

ನೀರು ನುಗ್ಗಿದ ಪ್ರದೇಶಗಳಿಗೆ ಬಂಟ್ವಾಳ ತಹಶೀಲ್ದಾರ್ ಸಂತೋಷ್, ತಹಶೀಲ್ದಾರ್ ಸಂತೋಷ್ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ನವೀನ್ ಬೆಂಜನಪದವು , ಪುರಸಭೆಯ ಅಧ್ಯಕ್ಷ ರಾಮಕೃಷ್ಣ ಆಳ್ವ, ಪುರಸಭಾ ಸದಸ್ಯರಾದ  ಜಗದೀಶ ಕುಂದರ್ , ದೇವದಾಸ ಶೆಟ್ಟಿ, ಗಂಗಾದರ್ ಇಂಜಿನಿಯರ್ ಡೊಮಿನಿಕ್ ಡಿ ಮಿಲ್ಲೋ , ಗ್ರಾಮ ಲೆಕ್ಕಾಧಿಕರಿ ಶಿವಾನಂದ ನಾಟೇಕಾರ್ ಸಿಬ್ಬಂದಿ ಸದಾಶಿವ ಕೈಕಂಬ .ಶಿವ ಪ್ರಸಾದ ಬಂಟ್ವಾಳ, ಅಗ್ನಿ ಶಾಮಕ ದಳ ಸಿಬ್ಬಂದಿ ಸ್ಥಳದಲ್ಲಿ ದ್ದು ಮುನ್ನೇಚರಿಕಾ ಕ್ರಮಗಳನ್ಮು ಕೈಗೊಂಡರು. ಪುರಸಭಾ ಇಲಾಖೆ ಜೆಸಿಬಿಗಳನ್ನು ಬಳಸಿ ಚರಂಡಿ ಹೂಳೆತ್ತುವ ಕೆಲಸ ಮಾಡಲಾಯಿತು.

pic: KISHORE PERAJE

ಬಿ.ಸಿ.ರೋಡಿನ ಶ್ರೀನಿವಾಸ್ ಹೊಟೇಲ್ ಬಳಿ ಪೆಟ್ರೋಲ್ ಪಂಪಿನಲ್ಲಿ ಚರಂಡಿ ಬ್ಲಾಕ್ ಆಗಿ ನೀರು ನಿಂತಿರುವುದು. ಚಿತ್ರ: ದೀಪಕ್ ಸಾಲ್ಯಾನ್, ಬಂಟ್ವಾಳ

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳ, ಬಿ.ಸಿ.ರೋಡಿನಲ್ಲಿ ಕೃತಕ ನೆರೆ, ಮನೆಗಳಿಗೆ ನುಗ್ಗಿದ ನೀರು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*