ಬಂಟ್ವಾಳ

ಶಾಸಕ ಪ್ರಯತ್ನದಂತೆ ಅಟಲ್ ಜನಸ್ನೇಹಿ ಕೇಂದ್ರ ಸ್ಥಳಾಂತರ

ತಾಲೂಕಿನ ಕೇಂದ್ರಭಾಗವಾದ ಬಿ.ಸಿ.ರೋಡಿನ ಹಳೇ ರಂಗಮಂದಿರದಲ್ಲಿ ಸೋರುವ ಕಟ್ಟಡಲ್ಲಿದ್ದ ಅಟಲ್ ಜಿ ಜನಸ್ನೇಹಿ ಕೇಂದ್ರ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಪ್ರಯತ್ನದ ಫಲವಾಗಿ ಸ್ಥಳಾಂತರಗೊಂಡಿದೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.

ಜಾಹೀರಾತು

ಬಂಟ್ವಾಳ ತಾಲೂಕು ಕಚೇರಿ ನಿರ್ಮಾಣ ಮಾಡುವ ಸಮಯ ಅಟಲ್ ಜೀ ಜನಸ್ನೇಹಿ ಕೇಂದ್ರವನ್ನು ತಾತ್ಕಾಲಿಕವಾಗಿ ಹತ್ತಿರದ ಹಳೆ ರಂಗ ಮಂದಿರ ಕಟ್ಟಡಕ್ಕೆ ಸ್ಥಳಾಂತರಗೊಳಿಸಲಾಗಿತ್ತು. ತದನಂತರ ಮಿನಿ ವಿಧಾನ ಸೌಧ ನಿರ್ಮಾಣಗೊಂಡು ಉದ್ಫಾಟನೆಗೊಂಡು ನಂತರ ಎಲ್ಲಾ ಕಚೇರಿಗಳು ಹೊಸ ಮಿನಿ ವಿಧಾನ ಸೌಧದಲ್ಲಿ ಕಾರ್‍ಯಾರಂಭಗೊಂಡರೂ ಸಹ ತಿಂಗಳುಗಟ್ಟಲೇ ಅಟಲ್ ಜೀ ಜನಸ್ನೇಹಿ ಕೇಂದ್ರ ಮಾತ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಹೊಳ್ಳಲಿಲ್ಲ. ಇದರಿಂದ ಈ ವರ್ಷದ ಆರಂಭದಲ್ಲಿ ಬಂದ ಗಾಳಿ ಮನೆಗೆ ಹಳೆ ರಂಗ ಮಂದಿರ ಸೋರಿ ನೀರು ಬಿದ್ದು ಕಡತ, ಆಧಾರ್ ಕೇಂದ್ರದ ಕಂಪ್ಯೂಟರ್ ಹಾಳಾಗಿದ್ದವು. ಈ ಹಿನ್ನಲೆಯಲ್ಲಿ ಅಟಲ್ ಜೀ ಜನಸ್ನೇಹಿ ಕೇಂದ್ರವನ್ನು ತಕ್ಷಣ ಮಿನಿ ವಿಧಾನ ಸೌಧಕ್ಕೆ ಸ್ಥಳಾಂತರಿಸುವಂತೆ ತಾ.ಪಂ.ಸದಸ್ಯ ಪ್ರಭಾಕರ ಪ್ರಭು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರಿಗೆ ಮನವಿ ಸಲ್ಲಿಸಿದ್ದರು. ಮನವಿಗೆ ಸ್ಪಂದಿಸಿದ  ಶಾಸಕರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಶೀಘ್ರ ಸ್ಥಳಾಂತರಿಸಲು ಸೂಚನೆ ನೀಡಿದ್ದರು. ಇದೀಗ ಜಿಲ್ಲಾಧಿಕಾರಿ ಸೂಚನೆಯಂತೆ ಅಟಲ್ ಜೀ ಜನಸ್ನೇಹಿ ಕೇಂದ್ರ ಮಿನಿ ವಿಧಾನ ಸೌಧ ಕಟ್ಟಡದೊಳಗೆ ಸ್ಥಳಾಂತರಗೊಂಡಿರುವುದಾಗಿ ಶಾಸಕರ ಕಚೇರಿ ಪ್ರಕಟಣೆಯಲ್ಲಿ ವಿವರಿಸಲಾಗಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ