ಬಂಟ್ವಾಳ

ಬಂಟ್ವಾಳ ರೋಟರಿ ಕ್ಲಬ್‌ನಿಂದ ಸಭಾಂಗಣ ಕೊಡುಗೆ

ಬಂಟ್ವಾಳ ರೋಟರಿ ಕ್ಲಬ್‌ನ ಸುವರ್ಣ ವರ್ಷಾಚರಣೆ ಪ್ರಯುಕ್ತ ಸೇವಾ ಚಟುವಟಿಕೆಗಳ ಅಂಗವಾಗಿ ಮಣಿನಾಲ್ಕೂರು ಸರಕಾರಿ ಪ್ರೌಢ ಶಾಲೆಗೆ 4.5 ಲ.ರೂ. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಸಭಾಂಗಣದ ಉದ್ಘಾಟನಾ ಕಾರ್ಯಕ್ರಮ ಜರಗಿತು.

ಜಾಹೀರಾತು

ರೋಟರಿ ಜಿಲ್ಲಾ ಗವರ್ನರ್. ಸುರೇಶ್ ಚೆಂಗಪ್ಪ  ಅವರು ನೂತನ ಸಭಾಂಗಣವನ್ನು ಉದ್ಘಾಟಿಸಿ ಮಾತನಾಡಿ, ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವ ಬಂಟ್ವಾಳ ರೋಟರಿ ಕ್ಲಬ್ ಜನಪರ ಕಾರ್ಯಕ್ರಮಗಳಿಂದ ಮಾದರಿ ಕ್ಲಬ್ ಎಂದು ಗುರುತಿಸಲ್ಪಟ್ಟಿದೆ ಎಂದು ಹೇಳಿದರು.

ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಸಂಜೀವ ಪೂಜಾರಿ ಅವರು ಅಧ್ಯಕ್ಷತೆ ವಹಿಸಿದ್ದರು.

ಸುವರ್ಣ ಮಹೋತ್ಸವದ ಆಚರಣೆ ನಿಯೋಜಿತ ಅಧ್ಯಕ್ಷ ಮಂಜುನಾಥ ಆಚಾರ್ಯ,.ಸೂರ್ಯನಾರಾಯಣ ರಾವ್, ವಲಯ 4 ರ ಸಹಾಯಕ ಗವರ್ನರ್ ಪ್ರಕಾಶ್ ಕಾರಂತ, ನಾರಾಯಣ ಹೆಗಡೆ, ಶಿವಾನಿ ಬಾಳಿಗಾ,ಎ.ಎಂ. ಕುಮಾರ್, ಪ್ರಕಾಶ್ ಬಾಳಿಗ, ವರದರಾಜ್ ಬಂಗೇರ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಮತ್ತು ಸದಸ್ಯರು, ಶಿಕ್ಷಕ ವೃಂದ, ಪೋಷಕರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಲೋಕ ನಾಯಕ್ ಸ್ವಾಗತಿಸಿದರು. ಶಿಕ್ಷಕಿ ರೆಜಿಲಾ ಪಾಸ್ ವಂದಿಸಿದರು. ಶಿಕ್ಷಕಿ ರಾಜೇಶ್ವರಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.