ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿ, ಛಾವಣಿ ರಚನೆಗೆ ವೃಕ್ಷ ಮುಹೂರ್ತ

ಪುರಾಣ ಪ್ರಸಿದ್ಧ ಬಂಟ್ವಾಳ ತಾಲೂಕಿನ ವಾಮದಪದವು ಸಮೀಪದ ಅಜ್ಜಿಬೆಟ್ಟು ಪದವು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ 2 ಕೋ. ರೂ ವೆಚ್ಚದಲ್ಲಿ ಪುನರ್ನಿರ್ಮಾಣಗೊಳ್ಳುತ್ತಿರುವ ಪ್ರಯುಕ್ತ ದೇವಸ್ಥಾನದ ಗರ್ಭಗುಡಿ, ಸುತ್ತು ಪೌಳಿ ಮೊದಲಾದ ಛಾವಣಿಯ ರಚನೆಗಾಗಿ ಮರದ ಉಪಯೋಗಕ್ಕೆ ಮರಕಡಿಯಲು ವಾಮದಪದವಿನಲ್ಲಿ ವೃಕ್ಷ ಮುಹೂರ್ತ ಕಾರ್ಯಕ್ರಮ ನಡೆಯಿತು.

ಜಾಹೀರಾತು

ಕ್ಷೇತ್ರದ ತಂತ್ರಿ ಶ್ರೀಪಾದ ಪಾಂಗಣ್ಣಾಯ ಅವರು ವೈದಿಕ ವಿಧಿ ವಿಧಾನಗಳನ್ನು ನಡೆಸಿ, ಸಾಮೂಹಿಕ ಪ್ರಾರ್ಥನೆ ನಡೆಸಿ, ದೇವಸ್ಥಾನದ ನಿರ್ಮಾಣ ಕಾರ್ಯದಲ್ಲಿ ಮರದ ಉಪಯೋಗಕ್ಕಾಗಿ ಮರ ಕಡಿಯಬೇಕಾಗುವುದರಿಂದ  ದೇವರನ್ನು ಪೂಜಿಸಿ ವೃಕ್ಷ ಮುಹೂರ್ತ ನಡೆಸುವುದರಿಂದ ದೇಗುಲ ನಿರ್ಮಾಣ ಕಾರ್ಯ ಯಶಸ್ವಿಯಾಗುವುದು ಎಂದು ಹೇಳಿದರು. ದೇವಳದ ಅರ್ಚಕ ಅನಂತ ಮಹಿಮ ಭಟ್ ಸಹಕಾರದಲ್ಲಿ ತೇಗದ ಮರಕ್ಕೆ ವೃಕ್ಷ ಮುಹೂರ್ತ ನಡೆಯಿತು. ಕಾರ್ಯಕ್ರಮಕ್ಕೆ ಮುನ್ನ ಪದವು ದೇವಸ್ಥಾನದಲ್ಲಿ ವೃಕ್ಷ ಮುಹೂರ್ತಕ್ಕಾಗಿ ವಿಶೇಷ ಪೂಜೆ ನಡೆಯಿತು.  ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ರಘುನಾಥ ಟಿ. ಪೈ ಮಾವಿನಕಟ್ಟೆ, ಅಧ್ಯಕ್ಷ ವಸಂತ ಶೆಟ್ಟಿ ಕೇದಗೆ, ಕಾರ್ಯಾಧ್ಯಕ್ಷೆ ಸುಲೋಚನಾ ಜಿ.ಕೆ. ಭಟ್, ವೃಕ್ಷ ದಾನಿಗಳಾದ ಸುನಂದಾ ಶೆಟ್ಟಿ, ರಮೇಶ್ ಶೆಟ್ಟಿ, ಕೃಷ್ಣ ಶೆಟ್ಟಿ ಗೋಂಜ, ವ್ಯವಸ್ಥಾಪನ ಸಮಿತಿ, ಜೀರ್ಣೋದ್ಧಾರ ಸಮಿತಿಗಳ ಪದಾಽಕಾರಿಗಳು ಮತ್ತು ಸದಸ್ಯರು,ಮಾಗಣೆ ಗ್ರಾಮಸ್ಥರು     ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿ, ಛಾವಣಿ ರಚನೆಗೆ ವೃಕ್ಷ ಮುಹೂರ್ತ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*