ವಿಟ್ಲ

ಅಲ್‌ಖೈರ್ ಮಹಿಳಾ ಶರೀಯತ್ ಕಾಲೇಜಿನ ಪ್ರಾರಂಭೋತ್ಸವ


ಜೀವನದಲ್ಲಿ ಸ್ವತ್ತು, ಸಂಪತ್ತು ಮುಖ್ಯವಲ್ಲ. ಇಸ್ಲಾಮಿನ ತತ್ವ ಆದರ್ಶಗಳನ್ನು ಮೈಗೂಡಿಸಿಕೊಂಡು ಬದುಕುವುದೇ ನಮ್ಮ ಸಂಪತ್ತು ಆಗಿದೆ. ಒಂದು ಮಹಿಳೆ ಧಾರ್ಮಿಕ ಶಿಕ್ಷಣ ಪಡೆದಾಗ ಇಡೀ ಒಂದು ಕುಟುಂಬ ಕಲಿತಂತೆ ಎಂದು ಪುತ್ತೂರು ಧರ್ಮಗುರು ಅಬೂಬಕ್ಕರ್ ಸಿದ್ದೀಕ್ ಜಲಾಲಿ ಹೇಳಿದರು.

ಅವರು ವಿಟ್ಲದ ಮೇಗಿನಪೇಟೆ ಅಲ್‌ಖೈರ್ ಮಹಿಳಾ ಶರೀಯತ್ ಕಾಲೇಜಿನ ಪ್ರಾರಂಭೋತ್ಸವ ದಲ್ಲಿ ಮುಖ್ಯ ಪ್ರಭಾಷಣ ಮಾಡಿದರು.

ಶಿಕ್ಷಣ ಪಡೆದ ಮಹಿಳೆ ಇತರರಿಗೆ ನೇತೃತ್ವ ವಹಿಸಬೇಕು. ಶಿಕ್ಷಕರನ್ನು ಹೆತ್ತರವರನ್ನು ಗೌರವಿಸಬೇಕು. ಮಹಿಳೆಯರಿಗೆ ಒಂದು ಕುಟುಂಬವನ್ನು ಮುನ್ನಡೆಸುವ ಸಾಮಾರ್ಥ್ಯ ಇದೆ. ತಂದೆ-ತಾಯಿಯನ್ನು ನೋಯಿಸಿದರೆ ಅದಕ್ಕೆ ಪರಿಹಾರವಿಲ್ಲ. ಇದರಿಂದ ಯಾವುದೇ ಪ್ರಯೋಜನವಿಲ್ಲ. ತಂದೆ ತಾಯಿಗಳಿಗೆ ವಿಶೇಷ ಗೌರವಿದೆ. ಅದನ್ನು ಪಾಲಿಸಿದಾಗ ದೇವರ ಅನುಗ್ರಹ ನಮ್ಮ ಮೇಲಿರುತ್ತದೆ. ಶರೀಯತ್ ಕಾಲೇಜಿನಲ್ಲಿ ಇಸ್ಲಾಮಿನ ನೈಜ ಆದರ್ಶಗಳನ್ನು ಕಲಿಸಿಕೊಡುವುದರ ಜತೆ ಮಹಿಳೆಯರಿಗೆ ಸಮಾಜದಲ್ಲಿ ಉತ್ತಮ ಸ್ಥಾನ ಮಾನ ನೀಡುತ್ತದೆ ಎಂದು ಹೇಳಿದರು.

ಜಾಹೀರಾತು

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅಬ್ದುರ್ರಹ್ಮಾನ್ ಫೈಝಿ ಪರ್ತಿಪ್ಪಾಡಿ ಅವರು ಮಹಿಳೆಯರು ಧಾರ್ಮಿಕ ಶಿಕ್ಷಣ ಪಡೆದಾಗ ಕುಟುಂಬ ಬಲಿಷ್ಠಗೊಳ್ಳುತ್ತದೆ. ಭೌದ್ಧಿಕ ಶಿಕ್ಷಣದ ಜತೆಗೆ ಧಾರ್ಮಿಕ ಶಿಕ್ಷಣ ಅವಶ್ಯ ಎಂದು ಹೇಳಿದರು.

ವಿಟ್ಲ ಕೇಂದ್ರ ಜುಮಾ ಮಸೀದಿ ಖತೀಬು ಅಬ್ದುಲ್ ಸಲಾಂ ಲತೀಫಿ ದುವಾಃ ಆಶೀರ್ವಚನ ನೀಡಿದರು. ಅಲ್ ಖೈರ್ ಶರೀಯತ್ ಕಾಲೇಜಿನ ಅಧ್ಯಕ್ಷ ಇಬ್ರಾಹಿಂ ಏರ್ ಸೌಂಡ್ ಅಧ್ಯಕ್ಷತೆ ವಹಿಸಿದ್ದರು. ಅಬ್ಬಾಸ್ ದಾರಿಮಿ ಕೆಲಿಂಜ ಹಾಗೂ ಇಬ್ರಾಹಿಂ ಫೈಝಿ ಪ್ರಾಸ್ತಾವಿಕ ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಅಬ್ದುಲ್ ಗಫೂರ್ ಹನೀಫಿ, ಕಾಲೇಜು ಆಡಳಿತ ಸಮಿತಿ ಸದಸ್ಯರಾದ ಇಬ್ರಾಹಿಂ ಹಾಜಿ, ಮಹಮ್ಮದ್ ಅಲಿ ವಿಟ್ಲ, ಹಮೀದ್ ಕುದ್ದುಪದವು ಉಪಸ್ಥಿತರಿದ್ದರು. ಅಬ್ದುಲ್ ಹಕೀಂ ಅರ್ಶದಿ ಸ್ವಾಗತಿಸಿದರು. ರಫೀಕ್ ಪೊನ್ನೋಟ್ಟು ವಂದಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.