ಲಯನ್ಸ್ ಕ್ಲಬ್ ಬಂಟ್ವಾಳದ ೪೬ನೇ ನೂತನ ಅಧ್ಯಕ್ಷರಾಗಿ ಉದ್ಯಮಿ ಸುಧಾಕರ ಆಚಾರ್ಯರವರು ಆಯ್ಕೆಯಾಗಿರುತ್ತಾರೆ. ಉಪಾಧ್ಯಕ್ಷರಾಗಿ ಕೆ. ಸೇಸಪ್ಪ ಕೋಟ್ಯಾನ್, ಶ್ರೀನಿವಾಸ ಪೂಜಾರಿ ಮೆಲ್ಕಾರ್, ಉಮೇಶ್ ಆಚಾರ್ಯ ಸಂಚಯಗಿರಿ ಇವರುಗಳು ಆಯ್ಕೆಯಾದರು. 8ರಂದು ನಡೆಯುವ ಕಾರ್ಯಕ್ರಮದಲ್ಲಿ ಪದಗ್ರಹಣ ನೆರವೇರಲಿದೆ.
೨೦೧೮-೧೯ನೇ ಸಾಲಿಗೆ ಕಾರ್ಯದರ್ಶಿಯಾಗಿ ಎಲ್ಲೈಸಿಯ ಅಧಿಕಾರಿ ರಾಮಯ್ಯ ಶೆಟ್ಟಿ ಸಂಪಿಲ, ಕೋಶಾಧಿಕಾರಿಯಾಗಿ ಸಂದೀಪ್ ಕುಮಾರ್ ನಾಗನವಳಚ್ಚಿಲು ಜತೆ ಕಾರ್ಯದರ್ಶಿ ಸ್ವರ್ಣೋದ್ಯಮಿ ಸುನೀಲ್ ಬಿ., ಜತೆ ಕೋಶಾಧಿಕಾರಿಯಾಗಿ ಕೇಶವ ಆಚಾರ್ಯ ಹಾಗೂ ಐಪಿಪಿಯಾಗಿ ಜಗದೀಶ್ ಯಡಪಡಿತ್ತಾಯ, ಲಯನೆಸ್ ಅಧ್ಯಕ್ಷರಾಗಿ ಶರ್ಮಿಳಾ ಸುಧಾಕರ ಆಚಾರ್ಯ, ಕಾರ್ಯದರ್ಶಿ ದಿವ್ಯಾ ವಸಂತ ಶೆಟ್ಟಿ, ಕೋಶಾಧಿಕಾರಿ ಜಯಂತಿ ಮುಕುಂದ ಪ್ರಭು ಆಯ್ಕೆಯಾಗಿರುತ್ತಾರೆ.
ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ೮ರಂದು ಬಿ.ಸಿ.ರೋಡು ಲಯನ್ಸ್ ಸೇವಾ ಮಂದಿರದಲ್ಲಿ ನೆರವೇರಲಿದೆ. ಪದಗ್ರಹಣ ಅಧಿಕಾರಿಯಾಗಿ ಲಯನ್ಸ್ ಜಿಲ್ಲಾ ವೈಸ್ ಗವರ್ನರ್ ರೊನಾಲ್ಡ್ ಐ. ಗೋಮ್ಸ್ರವರು ಹಾಗೂ ಮುಖ್ಯ ಅತಿಥಿಯಾಗಿ ಬಂಟ್ವಾಳದ ಶಾಸಕರಾದ ರಾಜೇಶ್ ನಾಕ್ ಉಳಿಪಾಡಿಗುತ್ತು ಭಾಗವಹಿಸಲಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…