ಬಂಟ್ವಾಳ

ಶಿಕ್ಷಕ ರಕ್ಷಕ ಸಂಘದ ಮಹಾಸಭೆ

ಬಂಟ್ವಾಳದ ವಿದ್ಯಾಗಿರಿಯಲ್ಲಿರುವ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ರಕ್ಷಕರ ಸಂಘದ ಮಹಾಸಭೆ ಶ್ರೀಧರ ಬಿ. ಅಧ್ಯಕ್ಷತೆಯಲ್ಲಿ ನಡೆಯಿತು.

ಜಾಹೀರಾತು

೨೦೧೭೧೮ನೇ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆ, ರಾಜ್ಯ, ರಾಷ್ಟ್ರಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನೂ, ಎಸ್.ಎಸ್.ಎಲ್.ಸಿ ೨೦೧೮ರ ಪಬ್ಲಿಕ್ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ೩೮ ವಿದ್ಯಾರ್ಥಿಗಳನ್ನು ನಗದು ಬಹುಮಾನ ಹಾಗೂ ಪ್ರಮಾಣಪತ್ರಗಳನ್ನಿತ್ತು ಸನ್ಮಾನಿಸಲಾಯಿತು.

ಶಾಲೆಗೆ ಪ್ರಥಮ ಹಾಗೂ ದ್ವಿತೀಯ ಸ್ಥಾನಿಗಳಾದ ವಿಧಾತ್ರಿ ಸೋಮಯಾಜಿ ಬಿ. ಹಾಗೂ  ಕ್ಷಮಾ ಆಚಾರ್ಯ ಬಿ. ಅವರಿಗೆ ಚಿನ್ನದ ಪದಕಗಳನ್ನಿತ್ತು ಗೌರವಿಸಲಾಯಿತುನಿವೃತ್ತಿಯ ಅಂಚಿನಲ್ಲಿರುವ ಶಾಲಾ ಮುಖ್ಯೋಪಾಧ್ಯಾಯ ಸೋಮನಾಥ ಭಟ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತುಬಳಿಕ ಶೈಕ್ಷಣಿಕ ವರ್ಷ ೨೦೧೮೧೯ಕ್ಕೆ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಶ್ರೀಧರ ಬಿ. ಅಧ್ಯಕ್ಷರಾಗಿಯೂ, ರೂಪಾ ಶೆಟ್ಟಿ ಉಪಾಧ್ಯಕ್ಷರಾಗಿಯೂ ಪುನರಾಯ್ಕೆಯಾದರುನೂತನ ಖಜಾಂಚಿ ಶ್ರೀ ಹರಿಶ್ಚಂದ್ರ, ನಿಕಟಪೂರ್ವ ಅಧ್ಯಕ್ಷ ಜಗದೀಶ ಯಡಪಡಿತ್ತಾಯ, ಶಾಲಾ ಸಂಚಾಲಕರಾದ ಭಾಮಿ ವಿಠಲ್ದಾಸ್ ಶೆಣೈ, ಆಡಳಿತಾಧಿಕಾರಿ ಐತಪ್ಪ ಪೂಜಾರಿ, ಮುಖ್ಯೋಪಾಧ್ಯಾಯಿನಿ ಸುಜಾತ ಬಿ. ಉಪಸ್ಥಿತರಿದ್ದರುರವಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.