ಬಂಟ್ವಾಳ

ಪ್ರೀತಿ, ವಾತ್ಸಲ್ಯದಿಂದ ಬದುಕಿದರೆ, ಸಂಘರ್ಷ ಅಶಾಂತಿಗೆ ದಾರಿ ಇಲ್ಲ

ಸಮಾಜದಲ್ಲಿ ಪರಸ್ಪರ ಪ್ರೀತಿ, ವಾತ್ಸಲ್ಯದಿಂದ ಬದುಕಿದರೆ ಯಾವುದೇ ರೀತಿಯ ಸಂಘರ್ಷ, ಅಶಾಂತಿಗೆ ಅವಕಾಶ ಇರುವುದಿಲ್ಲ ಎಂದು ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆಯ ಸಂಸ್ಥಾಪಕಿ,ನ್ಯಾಯವಾದಿ ಶೈಲಜಾ ರಾಜೇಶ್ ಹೇಳಿದ್ದಾರೆ.

ಜಾಹೀರಾತು

ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ಮತ್ತು ಕಾಲೇಜಿನ ಎನ್ ಎಸ್ ಎಸ್ ಘಟಕದ ವತಿಯಿಂದ ಬಿ ಮೂಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ನಡೆದ ಕಾನೂನು ಮಾಹಿತಿ ಶಿಬಿರ ಮತ್ತು ಸನ್ಮಾನ ಸಮಾರಂಭದಲ್ಲಿ ಮಕ್ಕಳ ಹಕ್ಕು ಮತ್ತು ಸಂರಕ್ಷಣೆ, ಫೋಕ್ಸೋ, ಮಹಿಳಾ ಕಾನೂನುಗಳ  ಬಗ್ಗೆ ಮಾಹಿತಿ ನೀಡಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಯೂಸೂಫ್ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ದೆಸೆಯಲ್ಲಿಯೇ ಕಾನೂನಿನ ಅರಿವು ಮೂಡಿಸಿಕೊಂಡರೆ ಸಮಾಜದಲ್ಲಿ ಶಾಂತಿ ನೆಲೆಯಾಗಲು ಸಾಧ್ಯ ಎಂದು ಅವರು ಹೇಳಿದರು. ಸಂಸ್ಥೆಯ ಟ್ರಸ್ಟಿ ಅನ್ನಪೂರ್ಣ ಬಾಬುರಾಜ್ ಉದ್ಘಾಟಿಸಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಗೋಪಾಲ ಅಂಚನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಮನುಷ್ಯ ಸಹಜ ಗುಣಗಳಾದ ಪ್ರೀತಿ, ಸಹೋದರತೆ, ಸಮಾನತೆ, ಮಾನವೀಯತೆ ಮೊದಲಾದ ಸದ್ಗುಣಗಳು ಬಲಗೊಂಡಾಗ ಸ್ವಸ್ಥ ಸಮಾಜ ನಿರ್ಮಾಣಗೊಳ್ಳುತ್ತದೆ, ಸಂವಿಧಾನದ ಆಶಯಗಳಿಗೆ ಪೂರಕವಾಗಿ ಜನರು ಬದುಕಿದಾಗ ಸಾಮರಸ್ಯ ನೆಲೆಯಾಗುತ್ತದೆ ಎಂದರು.

ಜಾಹೀರಾತು

ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್, ಉಪನ್ಯಾಸಕ ವೆಂಕಟೇಶ್ವರ ಭಟ್ ಉಪಸ್ಥಿತರಿದ್ದರು.ಜಾನಪದ ಕಲಾವಿದೆ ಶಾರದಾ ಜಿ. ಬಂಗೇರ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಶಾಹಿದ ಬೇಗಂ ಸ್ವಾಗತಿಸಿದರು. ಎನ್ ಎಸ್ ಎಸ್ ಅಧಿಕಾರಿ ಬಾಲಕೃಷ್ಣ ನಾಯ್ಕ್ ಕೆ. ವಂದಿಸಿದರು. ನ್ಯಾಯವಾದಿ ವಿದ್ಯಾಲತಾ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ