ಬಂಟ್ವಾಳ

ಜುಲೈ 19: ಬಂಟ್ವಾಳದಲ್ಲಿ ತುಳು ಭಾಷಾ ಶಿಕ್ಷಕರ ಕಾರ್‍ಯಾಗಾರ

ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗಳಲ್ಲಿ 2018-19 ನೇ ಸಾಲಿನಲ್ಲಿ ಒಟ್ಟು 40 ಶಾಲೆಗಳಲ್ಲಿ ತುಳು ಪಠ್ಯ ಅನುಷ್ಠನಗೊಂಡಿದ್ದು ಒಟ್ಟು 2012 ವಿದ್ಯಾರ್ಥಿಗಳು ತುಳು ಭಾಷೆಯನ್ನು ತೃತೀಯ ಭಾಷೆಯಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಪ್ರತಿ ವರ್ಷದಂತೆ ನಡೆಸುವ ತುಳು ಭಾಷಾ ಶಿಕ್ಷಕರಿಗೆ ತರಬೇತಿ ಕಾರ್‍ಯಾಗಾರವನ್ನು ಜುಲೈ 19ರಂದು ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಭಾಂಗಣದಲ್ಲಿ ನಡೆಸಲಾಗುವುದು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ನಡೆಯುವ ಈ ಕಾರ್‍ಯಾಗಾರವನ್ನು ಬೆಳಿಗ್ಗೆ 10 ಗಂಟೆಗೆ ಅಕಾಡೆಮಿ ಅಧ್ಯಕ್ಷ  ಎ.ಸಿ ಭಂಡಾರಿ ಅಧ್ಯಕ್ಷತೆಯಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ ಎನ್. ಉದ್ಘಾಟಿಸಲಿದ್ದಾರೆ. ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ರಾಜೇಶ್ ಜಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಗಳು ಕಾರ್‍ಯಾಗ್ರಹವನ್ನು ನಡೆಸಿ ಕೊಡಲಿದ್ದಾರೆ. ಎಲ್ಲಾ 40 ಶಾಲೆಗಳ ತುಳು ಭಾಷಾ ಶಿಕ್ಷಕರನ್ನು ಕಾರ್‍ಯಾಗಾರಕ್ಕೆ ಆಹ್ವಾನಿಸಲಾಗಿದೆ ಎಂದು ಅಕಾಡಮಿ ಸದಸ್ಯ ಎ.ಗೋಪಾಲ ಅಂಚನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ