ಬಂಟ್ವಾಳ

15ರಂದು ರೋಟರಿ ಟೌನ್ ಬಂಟ್ವಾಳ ಕ್ಲಬ್ ಪದಗ್ರಹಣ

ರೋಟರಿ ಕ್ಲಬ್ ಬಂಟ್ವಾಳ ಟೌನ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜು. 15ರಂದು ಸಂಜೆ 7 ಗಂಟೆಗೆ ಬಿ.ಸಿ.ರೋಡ್‌ನಲ್ಲಿರುವ ರೋಟರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಹೇಳಿದ್ದಾರೆ.

ಜಾಹೀರಾತು

ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೋಟರಿ ಜಿಲ್ಲೆ-2181ರ ಜಿಲ್ಲಾ ಸಹ ತರಬೇತುದಾರ ಬಿ.ಶೇಖರ್ ಶೆಟ್ಟಿ ಪದಗ್ರಹಣ ಸಮಾರಂಭ ನೇತೃತ್ವ ವಹಿಸುವರು. ವಲಯ-೪ರ ಅಸಿಸ್ಟೆಂಟ್ ಗವರ್ನರ್ ಎನ್. ಪ್ರಕಾಶ್ ಕಾರಂತ್, ಜೋನಲ್ ಲೆಫ್ಟಿನೆಂಟ್ ಸಂಜೀವ ಪೂಜಾರಿ, ರೋಟರಿ ಕ್ಲಬ್ ಬಂಟ್ವಾಳ ಅಧ್ಯಕ್ಷ ಮಂಜುನಾಥ ಆಚಾರ್ಯ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಮಾಹಿತಿ ನೀಡಿದರು. ಈ ವರ್ಷದ ರೋಟರಿ ೩೧೮೧ರ ಜಿಲ್ಲಾ ಗವರ್ನರ್ ರೋಹಿನಾಥ್ ಅವರ ಜಿಲ್ಲೆಯ ವಿಶೇಷ ಯೋಜನೆಯಾದ ಆಶಾ ಸ್ಫೂರ್ತಿ ಯೋಜನೆಯಡಿ ಜಿಲ್ಲೆಯ ಅಂಗನವಾಡಿಗಳ ಪುನಶ್ಚೇತನ ಹಾಗೂ ನೆರವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.ಸುದ್ದಿಗೋಷ್ಠಿಯಲ್ಲಿ ರೋಟರಿ ಕ್ಲಬ್ ಬಂಟ್ವಾಳ ಟೌನ್ ನಿಯೋಜಿತ ಅಧ್ಯಕ್ಷ ಉಮೇಶ್ ನಿರ್ಮಲ್, ನಿಯೋಜಿತ ಕಾರ್ಯದರ್ಶಿ ಜಯರಾಜ್ ಬಂಗೇರ, ವಲಯ-೪ರ ಅಸಿಸ್ಟೆಂಟ್ ಗವರ್ನರ್ ಎನ್. ಪ್ರಕಾಶ್ ಕಾರಂತ್ ಮತ್ತು ಆಶಾ ಮಣಿ ಉಪಸ್ಥಿತರಿದ್ದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.