ರೋಟರಿ ಕ್ಲಬ್ ಬಂಟ್ವಾಳ ಟೌನ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜು. 15ರಂದು ಸಂಜೆ 7 ಗಂಟೆಗೆ ಬಿ.ಸಿ.ರೋಡ್ನಲ್ಲಿರುವ ರೋಟರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಹೇಳಿದ್ದಾರೆ.
ಪ್ರೆಸ್ಕ್ಲಬ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೋಟರಿ ಜಿಲ್ಲೆ-2181ರ ಜಿಲ್ಲಾ ಸಹ ತರಬೇತುದಾರ ಬಿ.ಶೇಖರ್ ಶೆಟ್ಟಿ ಪದಗ್ರಹಣ ಸಮಾರಂಭ ನೇತೃತ್ವ ವಹಿಸುವರು. ವಲಯ-೪ರ ಅಸಿಸ್ಟೆಂಟ್ ಗವರ್ನರ್ ಎನ್. ಪ್ರಕಾಶ್ ಕಾರಂತ್, ಜೋನಲ್ ಲೆಫ್ಟಿನೆಂಟ್ ಸಂಜೀವ ಪೂಜಾರಿ, ರೋಟರಿ ಕ್ಲಬ್ ಬಂಟ್ವಾಳ ಅಧ್ಯಕ್ಷ ಮಂಜುನಾಥ ಆಚಾರ್ಯ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಮಾಹಿತಿ ನೀಡಿದರು. ಈ ವರ್ಷದ ರೋಟರಿ ೩೧೮೧ರ ಜಿಲ್ಲಾ ಗವರ್ನರ್ ರೋಹಿನಾಥ್ ಅವರ ಜಿಲ್ಲೆಯ ವಿಶೇಷ ಯೋಜನೆಯಾದ ಆಶಾ ಸ್ಫೂರ್ತಿ ಯೋಜನೆಯಡಿ ಜಿಲ್ಲೆಯ ಅಂಗನವಾಡಿಗಳ ಪುನಶ್ಚೇತನ ಹಾಗೂ ನೆರವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.ಸುದ್ದಿಗೋಷ್ಠಿಯಲ್ಲಿ ರೋಟರಿ ಕ್ಲಬ್ ಬಂಟ್ವಾಳ ಟೌನ್ ನಿಯೋಜಿತ ಅಧ್ಯಕ್ಷ ಉಮೇಶ್ ನಿರ್ಮಲ್, ನಿಯೋಜಿತ ಕಾರ್ಯದರ್ಶಿ ಜಯರಾಜ್ ಬಂಗೇರ, ವಲಯ-೪ರ ಅಸಿಸ್ಟೆಂಟ್ ಗವರ್ನರ್ ಎನ್. ಪ್ರಕಾಶ್ ಕಾರಂತ್ ಮತ್ತು ಆಶಾ ಮಣಿ ಉಪಸ್ಥಿತರಿದ್ದರು.
| ಮಂಗಳೂರಿನಲ್ಲಿ ಡಿಸೇಬಲಿಟಿ ಎನ್.ಜಿ.ಒ. ಅಲೆಯನ್ಸ್ ಕರಾವಳಿ ಧ್ವನಿ ಕಾರ್ಯಕ್ರಮ ಉದ್ಘಾಟನೆ (more…)