ಬಂಟ್ವಾಳ

ಪ್ರಾಕೃತಿಕ ಸಮತೋಲನಕ್ಕೂ ಜೇನು ಅಗತ್ಯ: ರಾಕೋಡಿ ಈಶ್ವರ ಭಟ್

ಜೇನು ಸಂತತಿ ನಾಶವಾದರೆ ಉತ್ಪಾದನೆ ಕಡಿಮೆಯಾಗಿ ಪ್ರಾಕೃತಿಕ ಸಮತೋಲನ ತಪ್ಪಬಹುದು. ಪ್ರಕೃತಿಯಲ್ಲಿ ಜೇನುನೊಣ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದು ತಜ್ಞ ರಾಕೋಡಿ ಈಶ್ವರ ಭಟ್ ಹೇಳಿದರು.

ಜಾಹೀರಾತು

ಕಲ್ಲಡ್ಕ ಶ್ರಿರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಜೇನು ಕೃಷಿ ಸಂಘದ ವಿದ್ಯಾರ್ಥಿಗಳಿಗೆ ಜೇನು ಕೃಷಿ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಚಲಿಸುವ ಚೌಕಟ್ಟಿನ ಪೆಟ್ಟಿಗೆಯಲ್ಲಿ ಸಾಕುವುದೇ ಜೇನು ಕೃಷಿ. ಜೇನುನೊಣದಲ್ಲಿ ನಾಲ್ಕು ವಿಧಗಳಿವೆ. ತುಡುವೆ ನೊಣವನ್ನು ಮಾತ್ರ ಪೆಟ್ಟಿಗೆಯಲ್ಲಿ ಸಾಕುತ್ತಾರೆ. ಜೇನುನೊಣ ಪಕೃತಿಯಲ್ಲಿ ಬಹುಮುಖ್ಯವಾದ ಪಾತ್ರ ವಹಿಸುತ್ತದೆ ಎಂದ ಅವರು, ಜೇನು ಸಾಕಣೆ ಹೇಗೆ ಮಾಡುವುದು, ಯಾವ ಜೇನಿನಿಂದ ಕೃಷಿ ಮಾಡುವುದು, ಅದರಿಂದಾಗುವ ಲಾಭ ಇತ್ಯಾದಿ ವಿಷಯದ ಕುರಿತಾದ ಮಾಹಿತಿಯನ್ನು ನೀಡಿದರು. ವೇದಿಕೆಯಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಕೋಶಾಧಿಕಾರಿಯಾದ ಶಿವಗಿರಿ ಸತೀಶ್ ಭಟ್ ಹಾಗೂ ಮುಖ್ಯಗುರುಗಳಾದ ರವಿರಾಜ ಕಣಂತೂರು ಉಪಸ್ಥಿತರಿದ್ದರು. ದೇವಿಕಾ ಸ್ವಾಗತಿಸಿ, ರೂಪಕಲಾ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ