ಬಂಟ್ವಾಳ

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಪದಾಧಿಕಾರಿಗಳ ಆಯ್ಕೆ

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ ಶುಕ್ರವಾರ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯಕ್ ಇಂದಾಜೆ ಉಪಸ್ಥಿತಿಯಲ್ಲಿ 2018-2021ನೇ ಸಾಲಿಗೆ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಪ್ರೆಸ್ ಕ್ಲಬ್ ಅಧ್ಯಕ್ಷ ಪ್ರಶಾಂತ ಪುಂಜಾಲಕಟ್ಟೆ ಉಪಸ್ಥಿತರಿದ್ದರು. ನಿರ್ಗಮನ ಅಧ್ಯಕ್ಷ ಮೌನೇಶ ವಿಶ್ವಕರ್ಮ ಮಾತನಾಡಿ, ಎಲ್ಲಾ ಸದಸ್ಯರ ಸಹಕಾರದಿಂದಾಗಿ ಕಳೆದ ವರ್ಷ ಬಂಟ್ವಾಳ ತಾಲೂಕು ಪತ್ರಕರ್ತರ ಸಂಘದ ರಜತ ವರ್ಷಾಚರಣೆಯನ್ನು ಯಶಸ್ವಿಯಾಗಿ ಆಚರಿಸಲಾಗಿದೆ. ಮುಂದಿನ ದಿನಗಳಲ್ಲಿ ಹೊಸ ತಂಡಕ್ಕೆ ಎಲ್ಲರೂ ಸಹಕಾರ ನೀಡುವ ಮೂಲಕ ಹೊಂದಾಣಿಕೆಯೊಂದಿಗೆ ಸಂಘವನ್ನು ಮುನ್ನಡೆಸಬೇಕಾಗಿದೆ ಎಂದರು.

ಜಾಹೀರಾತು

ಅಧ್ಯಕ್ಷರಾಗಿ ಹರೀಶ ಮಾಂಬಾಡಿ, ಉಪಾಧ್ಯಕ್ಷರಾಗಿ ರಮೇಶ್ ಕೆ. ಪುಣಚ (ವಿಷ್ಣುಗುಪ್ತ), ಕಾರ್ಯದರ್ಶಿಯಾಗಿ ಮಹಮ್ಮದ್ ಆಲಿ ವಿಟ್ಲ, ಜತೆಕಾರ್ಯದರ್ಶಿಯಾಗಿ ಅಬ್ದುಲ್ ರಹಿಮಾನ್ ತಲಪಾಡಿ ಮತ್ತು ಕೋಶಾಧಿಕಾರಿಯಾಗಿ ಯಾದವ ಕುಲಾಲ್ ಅಗ್ರಬೈಲು ಸರ್ವಾನುಮತದಿಂದ ಆಯ್ಕೆಗೊಂಡರು.

ಹರೀಶ ಮಾಂಬಾಡಿ

ಮಹಮ್ಮದ್ ಆಲಿ ವಿಟ್ಲ

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ