ಪ್ರಮುಖ ಸುದ್ದಿಗಳು

ಶಿರಾಡಿ ರೆಡಿ -ಸದ್ಯಕ್ಕಂತೂ ವೇಗದ ಸವಾರಿ ಮಾಡಬೇಡಿ!

ಸಣ್ಣಪುಟ್ಟ ಕಾಮಗಾರಿಗಳು ಬಾಕಿ ಇರುವ ಕಾರಣ ಶಿರಾಡಿ ಘಾಟಿಯಲ್ಲಿ ಧಾವಂತದ, ವೇಗದ ಸವಾರಿ ಮಾಡಬೇಡಿ. ಈ ಎಚ್ಚರಿಕೆಯನ್ನು ಗಮನದಲ್ಲಿಟ್ಟುಕೊಂಡೇ ಸಂಚರಿಸಿ.

ಜಾಹೀರಾತು

ಹೀಗೊಂದು ಸಂದೇಶ ನೀಡುತ್ತಲೇ ಶಿರಾಡಿ ಘಾಟಿಯ ಕಾಂಕ್ರೀಟ್ ಕಾಮಗಾರಿಯ ರಸ್ತೆಯನ್ನು ಸಚಿವರು, ಸಂಸದರು ಹಾಗೂ ರಾಜಕಾರಣಿಗಳು, ಅಧಿಕಾರಿಗಳಿದ್ದ ಕಾರ್ಯಕ್ರಮದಲ್ಲಿ ಲೋಕಾರ್ಪಣೆ ಮಾಡಲಾಯಿತು.

ಬೆಂಗಳೂರಿನಿಂದ ಹಾಸನ ಮಾರ್ಗವಾಗಿ ದ.ಕ. ಜಿಲ್ಲೆ ಸಹಿತ ಕರಾವಳಿ ಪ್ರದೇಶಗಳನ್ನು ಸಂಪರ್ಕಿಸುವ ಘಾಟಿ ರಸ್ತೆ ಇದು.

ಜಾಹೀರಾತು

ಸಕಲೇಶಪುರ ತಾಲೂಕು ಕೆಂಪುಹೊಳೆ ಜಂಕ್ಷನ್ ನಲ್ಲಿ ಲೋಕಾರ್ಪಣೆ, ಮತ್ತು ಗುಂಡ್ಯದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವರಾದ ಎಚ್.ಡಿ.ರೇವಣ್ಣ, ವಸತಿ ಸಚಿವ ಯು.ಟಿ.ಖಾದರ್, ಸಂಸದ ನಳೀನ್ ಕುಮಾರ್ ಕಟೀಲ್ , ದ.ಕ.ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಪುತ್ತೂರು ಶಾಸಕ ಸಂಜೀವ ಮಠಂದೂರು, ಮಾಜಿ ಸಚಿವ ಬಿ.ರಮಾನಾಥ ರೈ ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.

ಜಾಹೀರಾತು

ಒಟ್ಟು 26 ಕಿಮೀ ಉದ್ದದ ಶಿರಾಡಿಘಾಟ್ ರಸ್ತೆಯ ಮೊದಲ ಹಂತದ 13 ಕಿಮೀ ಕಾಂಕ್ರೀಟ್ ಕಾಮಗಾರಿ ಮೂರು ವರ್ಷಗಳ ಹಿಂದೆ ಪೂರ್ಣಗೊಂಡಿತ್ತು ಬಳಿಕ ಮಾತನಾಡಿದ ಸಚಿವ ಯು.ಟಿ.ಖಾದರ್, ಒಟ್ಟು 26 ಕಿಮೀ ಉದ್ದರ ಶಿರಾಡಿಘಾಟ್ ರಸ್ತೆ ಪೂರ್ಣವಾಗಿ ಜನ ಬಳಕೆಗೆ ಮುಕ್ತವಾಗಿರುವುದು ಖುಷಿ ತಂದಿದೆ ಅಲ್ಲದೆ, ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಬಾಕಿ ಉಳಿದಿರುವ ಸಣ್ಣಪುಟ್ಟ ಕಾಮಗಾರಿಗಳನ್ನು ಶೀಘ್ರವೇ ಮುಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಆದರೆ ಇನ್ನೂ ಶಿರಾಡಿ ಘಾಟಿ ರಸ್ತೆಯಂಚಿನ ತಡೆಗಳ ನಿರ್ಮಾಣ ಕಾರ್ಯ ಸಂಪೂರ್ಣವಾಗಿ ಆಗಬೇಕಷ್ಟೇ. ಕೆಲದಿನಗಳ ಮಟ್ಟಿಗೆ ಈ ಘಾಟಿಯಲ್ಲಿ ವೇಗದ ಸವಾರಿಯನ್ನು ನಿಯಂತ್ರಿಸುವುದು ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಒಳ್ಳೆಯದು.

ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ