ಬಂಟ್ವಾಳ

ಹೊರರಾಜ್ಯಗಳಿಂದ ಆಮದು ಮಾಡುವ ಬದಲು ಇಲ್ಲೇ ಕೃಷಿ ಉತ್ಪಾದನೆ: ಶಾಸಕ ರಾಜೇಶ್ ನಾಯ್ಕ್ ಸಲಹೆ

  • ಬಂಟ್ವಾಳ ತಾಲೂಕು ಮಟ್ಟದ ಇಲಾಖೆಗಳ ನಡಿಗೆ – ರೈತರ ಬಾಗಿಲಿಗೆ ಕಾರ್ಯಕ್ರಮಕ್ಕೆ ಚಾಲನೆ

ವಿವಿಧ ಯೋಜನೆಗಳಲ್ಲಿ ವಿತರಿಸಲಾಗುತ್ತಿರುವ ಅಕ್ಕಿ, ಗೋಧಿ ಹಾಗೂ ಇನ್ನಿತರ ಸರಕುಗಳನ್ನು ರಾಜ್ಯ ಸರಕಾರ ಬೇರೆ ರಾಜ್ಯಗಳಿಂದ ಆಮದು ಮಾಡುತ್ತಿರುವುದು ಬೇಸರ ತಂದಿದೆ. ಸರಕಾರವು ವಿವಿಧ ಫಲಾನುಭಗಳಿಗೆ ನೀಡುವ ಅಕ್ಕಿ, ಗೋಧಿ, ಧಾನ್ಯಗಳಲ್ಲಿ ಶೇ.100ರಲ್ಲಿ 80ರಷ್ಟು ಹೊರ ಜಿಲ್ಲೆಗಳಿಂದ ಆಮದು ಮಾಡುವ ಬದಲು ರಾಜ್ಯದಲ್ಲಿಯೇ ಇದನ್ನು ಉತ್ಪಾದನೆ ಮಾಡಿದರೆ ಇಲ್ಲಿನ ರೈತರ ಬಾಳು ಹಸನಾಗಲು ಸಾಧ್ಯ ಎಂದು ಬಂಟ್ವಾಳ ಶಾಸಕ ಯು. ರಾಜೇಶ್ ನಾಯ್ಕ್ ಅಭಿಪ್ರಾಯಪಟ್ಟರು.

ಜಾಹೀರಾತು

ಜಿಲ್ಲಾ ಪಂಚಾಯತ್-ಕೃಷಿ ಇಲಾಖೆ ಇದರ ವತಿಯಿಂದ ಬಿ.ಸಿ.ರೋಡ್ ಸ್ತ್ರೀ ಶಕ್ತಿ ಭವನದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ “ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ” ಮತ್ತು ಬಂಟ್ವಾಳ ಹೋಬಳಿ ಮಟ್ಟದ ಸಮಗ್ರ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರೈತರ ಆದಾಯ ದುಪ್ಪಟ್ಟುಗೊಂಡಾಗ ಭಾರತ ವಿಶ್ವಗುರು ಆಗಲಿದೆ ಎಂದವರು, ತಾನೊಬ್ಬ ರೈತ, ಕೃಷಿಕ ಎನ್ನುವುದಕ್ಕೆ ಯಾವುದೇ ಹಿಂಜರಿಕೆ ಬೇಡ. ಕೃಷಿ ಕಸುಬನ್ನು ಗೌರವಿಸುವುರ ಜೊತೆಗೆ ನಂಬಿಕೆಯಿಂದ ಕೆಲಸ ಮಾಡಿದರೆ ಕೃಷಿ ಲಾಭದಾಯಕವಾದ ಉದ್ಯೋಗವಾಗಲಿದೆ ಎಂದರು.

ರೈತರಿಗೆ ಅನ್ಯಾಯ:

ರಾಜ್ಯ ಬಜೆಟ್‌ನಲ್ಲಿ ಇಸ್ರೇಲ್ ಮಾದರಿಯ ಕೃಷಿ ತಂತ್ರಜ್ಞಾನಕ್ಕೆ ದ.ಕ. ಹಾಗೂ ಉಡುಪಿ ಜಿಲ್ಲೆಗಳನ್ನು ಕೈ ಬಿಟ್ಟಿರುವುದು ಇಲ್ಲಿನ ಸಣ್ಣ ಹಿಡುವಳಿದಾರರ ರೈತರಿಗೆ ಮಾಡಿದ ಅನ್ಯಾಯವಾಗಿದೆ. ಇಸ್ರೇಲ್ ಮಾದರಿಯ ಕೃಷಿಗೆ ಅವಳಿ ಜಿಲ್ಲೆಗಳನ್ನು ಸೇರಿಸಬೇಕೆಂದು ಮುಖ್ಯಮಂತ್ರಿ ಅವರೊಂದಿಗೆ ಮನವಿ ಮೂಲಕ ಒತ್ತಾಯಿಸಿದ್ದು, ಈ ಬಗ್ಗೆ ಸಭೆ ಕರೆಯುವ ಭರವಸೆ ನೀಡಿರುವುದಾಗಿ ಅವರು ಮಾಹಿತಿ ನೀಡಿದರು. ಜಂಟಿ ಕೃಷಿ ನಿರ್ದೇಶಕ ಡಾ. ಆಂಟನಿ ಮರಿಯಾ ಇಮಾನ್ಯುವಲ್ ಅವರು ಪ್ರಸ್ತಾವಿಸಿದರು. ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಯು.ಪಿ.ಇಬ್ರಾಹಿಂ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಜಿಪಂ ಸದಸ್ಯ ಕಮಲಾಕ್ಷಿ, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ತಹಶೀಲ್ದಾರ್ ಪುರಂದರ ಹೆಗ್ಡೆ, ತೋಟಗಾರಿಕಾ ಇಲಾಖೆಯ ದಿನೇಶ್, ಪ್ರಿಯಾಂಕಾ, ಹರೀಶ್ ಶೆಣೈ ಉಪಸ್ಥಿತರಿದ್ದರು. ಬಂಟ್ವಾಳ ಸಹಾಯಕ ಕೃಷಿ ನಿರ್ದೇಶಕ ನಾರಾಯಣ ಶೆಟ್ಟಿ ಸ್ವಾಗತಿಸಿದರು. ಮಂಜು ವಿಟ್ಲ ವಂದಿಸಿದರು. ಕೃಷಿ ರಂಗದಲ್ಲಿ ವಿಶೇಷ ಸಾಧನೆಗೈದ ತಾಲೂಕಿನ ರೈತರಾದ ಪೂವಪ್ಪ, ಪದ್ಮನಾಭ ತುಂಬೆ, ಲಕ್ಷ್ಮೀ ತುಂಬೆ, ಪ್ರಫುಲ್ಲಾ ರೈ, ಚಂದ್ರಶೇಖರ, ನಿಶ್ಚಲ್ ಶೆಟ್ಟಿ, ಧನ್ಯಾ ಹಾಗೂ ರಾಮಣ್ಣ ಗೌಡ ಅವರನ್ನು ಸನ್ಮಾನಿಸಲಾಯಿತು. ಬಳಿಕ ಸರಪಾಡಿ ಸಶೋಕ್ ಶೆಟ್ಟಿ ತಂಡದಿಂದ “ಅನ್ನದಾತನ ವಿಮೋಚನೆ” ಎಂಬ ಕಿರುನಾಟಕ ನಡೆಯಿತು.

ಸಭಾ ಕಾರ್ಯಕ್ರಮ ಬಳಿಕ ಬಂಟ್ವಾಳ ಸಹಾಯಕ ಕೃಷಿ ನಿರ್ದೇಶಕ ಕಚೇರಿ ಮುಂಬಾಗದಲ್ಲಿ ಬಂಟ್ವಾಳ ಹೋಬಳಿ ಸಮಗ್ರ ಕೃಷಿ ಅಭಿಯಾನದ ವಾಹನ ಜಾಥಾಕ್ಕೆ ಶಾಸಕ ರಾಜೇಶ್ ನಾಯ್ಕ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

12 hours ago