ಲಯನ್ಸ್ ಮತ್ತು ಲಯನೆಸ್ ಕ್ಲಬ್ ಬಂಟ್ವಾಳಕ್ಕೆ ದ.ಕ, ಮಡಿಕೇರಿ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳನ್ನು ಒಳಗೊಂಡ 317 ಡಿಯಲ್ಲಿ ರನ್ನರ್ ಅಪ್ ಪ್ರಶಸ್ತಿ ದೊರಕಿದೆ.
ಈ ಪ್ರಶಸ್ತಿಯನ್ನು ಮಂಗಳೂರಿನ ಕೊರ್ಡೆಲ್ ಹಾಲ್ ನಲ್ಲಿ ನಡೆದ ಜಿಲ್ಲಾ ಎವಾರ್ಡ್ ನೈಟ್ 2018 ನಮನದಲ್ಲಿ ಗಣ್ಯರ ಸಮ್ಮುಖ ಜಿಲ್ಲಾ ರಾಜ್ಯಪಾಲ ಎಚ್.ಆರ್. ಹರೀಶ್ ಅವರಿಂದ ಕ್ಲಬ್ ಅಧ್ಯಕ್ಷ ಜಗದೀಶ ಎಡಪಡಿತ್ತಾಯ ಮತ್ತು ಲಯನೆಸ್ ಅಧ್ಯಕ್ಷೆ ಚಿತ್ರಾ ಎಡಪಡಿತ್ತಾಯ ಸದಸ್ಯರೊಂದಿಗೆ ಪಡೆದುಕೊಂಡರು. ಕ್ಯಾಬಿನೆಟ್ ಕಾರ್ಯದರ್ಶಿ ವಸಂತ ಕುಮಾರ್ ಶೆಟ್ಟಿ, ಜಿಲ್ಲಾ ಮೊದಲ ಮಹಿಳೆ ನಮಿತಾಹರೀಶ್, ಕ್ಲಬ್ ಕಾರ್ಯದರ್ಶಿ ರಾಮಕೃಷ್ಣ ರಾವ್, ಸುಜಾತಾ ರವಿಶಂಕರ್, ಕೋಶಾಧಿಕಾರಿಗಳಾದ ರೋಹಿತಾಶ್ವ ಎಂ, ವಸಂತ ಎಲ್. ಶೆಟ್ಟಿ, ಕ್ಲಬ್ ನೂತನ ಅಧ್ಯಕ್ಷ ಸುಧಾಕರ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…