ಬಂಟ್ವಾಳ

ಭ್ರಷ್ಟಾಚಾರ ನಿರ್ಮೂಲನೆಗೆ ಸಾರ್ವಜನಿಕರ ಸಹಕಾರ ಅಗತ್ಯ: ಡಿವೈಎಸ್ಪಿ ಸುಧೀರ್ ಹೆಗಡೆ

ಭ್ರಷ್ಟಾಚಾರ ನಿರ್ಮೂಲನೆಗೆ ಸಾರ್ವಜನಿಕರ ಸಹಕಾರ ಮುಖ್ಯ ಎಂದು ಡಿವೈಎಸ್ಪಿ ಸುಧೀರ್ ಎಂ.ಹೆಗಡೆ ಹೇಳಿದ್ದಾರೆ.

ಜಾಹೀರಾತು

ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ ಮಂಗಳೂರು, ರೋಟರಿ ಕ್ಲಬ್ ಬಂಟ್ವಾಳ ಸಹಯೋಗದೊಂದಿಗೆ ಭ್ರಷ್ಟಾಚಾರ ನಿರ್ಮೂಲನೆಯ ಬಗ್ಗೆ ಮಾಹಿತಿ ಮತ್ತು ಜನಸಂಪರ್ಕ ಸಭೆ ಬಂಟ್ವಾಳದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ನಡೆಯಿತು. ಈ ಸಂದರ್ಭ ಮಾತನಾಡಿದ ಅವರು, ವಿದ್ಯಾರ್ಥಿಗಳು ಭ್ರಷ್ಟಾಚಾರ ನಿರ್ಮೂಲನೆ ಕುರಿತು ಜಾಗೃತರಾಗಿ ರಚನಾತ್ಮಕ ಪಾತ್ರ ನಿರ್ವಹಿಸಿದರೆ ಇದು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ರೋಟರಿ ಕ್ಲಬ್ ಬಂಟ್ವಾಳ ಅಧ್ಯಕ್ಷ ಮಂಜುನಾಥ ಆಚಾರ್ಯ ಮಾತನಾಡಿ, ಇಂದು ಭ್ರಷ್ಟಾಚಾರ ಎಂಬುದು ದೇಶದ ದೊಡ್ಡ ಪಿಡುಗಾಗಿದೆ ಎಂದು ಹೇಳಿದರು.

ಜಾಹೀರಾತು

ರೋಟರಿ ಕ್ಲಬ್ ಕಾರ್ಯದರ್ಶಿ ಶಿವಾನಿ ಬಾಳಿಗ, ಕಾಲೇಜು ಪ್ರಾಂಶುಪಾಲ ಡಾ. ಅಜಕ್ಕಳ ಗಿರೀಶ ಭಟ್, ಎಸಿಬಿ ಇನ್ಸ್ ಪೆಕ್ಟರ್ ಯೋಗೀಶ ನಾಯ್ಕ್, ರೋಟರಿ ಸದಸ್ಯರಾದ ವಸಂತ ಪ್ರಭು, ವಸಂತ್ ರಾವ್, ಪ್ರಕಾಶ್ ಬಾಳಿಗಾ, ಸಂದೀಪ್ ಮಿನೇಜಸ್, ಕೆ.ಎನ್. ಹೆಗ್ಡೆ, ರೋಟರ್ಯಾಕ್ಟ್ ಕೋಆರ್ಡಿನೇಟರ್ ಉಪನ್ಯಾಸಕ ನಂದಕಿಶೋರ್ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ