ಸ್ಥಾಯಿ ಸಮಿತಿಯ ಸಭೆಯಲ್ಲಿ ಪ್ರಸ್ತಾಪಗೊಂಡ ತ್ಯಾಜ್ಯ ವಿಲೇವಾರಿ ಸಮಸ್ಯೆ

ಪುರಸಭೆ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಅಸಮರ್ಪಕವಾಗಿ ನಡೆಯುತ್ತಿದೆ, ಪಾಣೆಮಂಗಳೂರುನಲ್ಲಿರುವ ಸರಕಾರಿ ಹಾಸ್ಟೆಲ್ ನಲ್ಲಿರುವ ಕಸತ್ಯಾಜ್ಯವನ್ನು ತೆಗೆದುಕೊಂಡು ಹೋಗುತ್ತಲೇ ಇಲ್ಲ. ಇಂಥ ಹಲವಾರು ಪ್ರಕರಣಗಳಿರುವಾಗ ಕಸ ವಿಂಗಡಣೆ ಪ್ರಕ್ರಿಯೆ ಹೇಗೆ ಯಶಸ್ವಿಯಾಗಲು ಸಾಧ್ಯ ಎಂದು ಬಿ.ವಾಸು ಪೂಜಾರಿ ಲೊರೆಟ್ಟೋ ಅಧ್ಯಕ್ಷತೆಯಲ್ಲಿ ಗುರುವಾರ ಸಂಜೆ ನಡೆದ ಸ್ಥಾಯಿ ಸಮಿತಿ ಸಭೆಯಲ್ಲಿ ಸದಸ್ಯರು ಪ್ರಶ್ನಿಸಿದರು.

ಜಾಹೀರಾತು

ವಿಷಯ ಪ್ರಸ್ತಾಪಿಸಿದ ಸದಸ್ಯೆ ಚಂಚಲಾಕ್ಷಿ, ಪಾಣೆಮಂಗಳೂರಿನ ತನ್ನ ವಾರ್ಡಿನಲ್ಲಿ ಕಸ ಗೊಬ್ಬರವಾಗುತ್ತಿದೆ. ನನ್ನ ಮನೆಗೆ ಬಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ. ನಮ್ಮ ಕಸ ವಿಲೇವಾರಿ ವ್ಯವಸ್ಥೆ ಯಾಕೆ ಹೀಗಿದೆ ಎಂದು ಪ್ರಶ್ನಿಸಿದರು. ಈ ಕುರಿತು ಉತ್ತರಿಸಿದ ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ, ಪ್ರತಿದಿನ ಕಸ ವಿಲೇವಾರಿಗೆ ಸೂಚನೆ ನೀಡಿದ್ದಾಗಿ ಹೇಳಿದರು. ಕಂಚಿನಡ್ಕಪದವಿನ ಸಜೀಪನಡುವಿನ ತ್ಯಾಜ್ಯ ವಿಲೇವಾರಿ ಘಟಕದ ಸಮಸ್ಯೆ ಬಗೆಹರಿಯುತ್ತಿಲ್ಲ, ಮಹಾನಗರ ಪಾಲಿಕೆಯವರು ಕಸ ಸ್ವೀಕರಿಸುತ್ತಿಲ್ಲ ಎಂದು ತಿಳಿಸಿದರು. ಈ ಬಗ್ಗೆ ಶಾಸಕರ ಜೊತೆ ಸಭೆ ನಡೆಸುವಂತೆ ಜಗದೀಶ ಕುಂದರ್ ಸಲಹೆ ನೀಡಿದರು.. ಈ ಸಂದರ್ಭ ಮಾತನಾಡಿದ ಅಧಿಕಾರಿ ಮತ್ತಡಿ, ಕೆಲವೆಡೆ ಬಕೆಟ್ ವಿತರಣೆ ಬಾಕಿ ಇದ್ದು, ಬಾಕಿ ಇರುವ ವಾರ್ಡುಗಳಲ್ಲಿ ವಿತರಣೆಗೆ ವ್ಯವಸ್ಥೆ ಮಾಡಲಾಗುವುದು ಎಂದರು.

ರಸ್ತೆಗೆ ಗುಡ್ಡ ಜರಿದರೂ ಇನ್ನೂ ಅಧಿಕಾರಿಗಳು ಬಾರದಿರುವ ಕುರಿತು ವಾಸು ಪೂಜಾರಿ ಗಮನ ಸೆಳೆದರು. ಬೀದಿದೀಪಗಳು ಹೋದರೂ ಅದನ್ನು ಅನುಷ್ಠಾನಿಸದ ಕುರಿತು ಸದಸ್ಯ ಬಿ.ಮೋಹನ್ ಪ್ರಸ್ತಾಪಿಸಿದರು. ಇದೇ ವೇಳೆ ಕುಡಿಯುವ ನೀರಿನ ಪೈಪ್ ಲೈನ್ ಅಳವಡಿಕೆ ಸಂದರ್ಭ ರಸ್ತೆಗಳ ತಿರುವಿನಲ್ಲಿ ಆದ ಹಾನಿ ಇನ್ನೂ ದುರಸ್ತಿಯಾಗಿಲ್ಲ. ನಿಗದಿಪಡಿಸಿದ ಮೊತ್ತವನ್ನು ಆದ್ಯತೆಯ ಮೇರೆಗೆ ವಿನಿಯೋಗಿಸುವಂತೆ ಬಿ.ಮೋಹನ್ ಹೇಳಿದರು. ಬೀದಿಬದಿ ವ್ಯಾಪಾರಸ್ಥರಿಗೆ ಸೂಕ್ತ ಜಾಗ ಇನ್ನೂ ಆಗದೇ ಇರುವುದರ ಸಹಿತ ನಾನಾ ವಿಷಯಗಳ ಕುರಿತು ಚರ್ಚೆ ನಡೆಯಿತು. ಪ್ರಭಾ ಆರ್ ಸಾಲ್ಯಾನ್, ಜಗದೀಶ್ ಕುಂದರ್, ಚಂಚಲಾಕ್ಷಿ, ಬಿ.ಮೋಹನ್ ವಿವಿಧ ವಿಷಯಗಳ ಕುರಿತು ಮಾತನಾಡಿದರು. ಅಧಿಕಾರಿಗಳಾದ ಡೊಮಿನಿಕ್ ಡಿಮೆಲ್ಲೊ, ಮತ್ತಡಿ ಹಾಗೂ ಮೆಸ್ಕಾಂ ಇಂಜಿನಿಯರ್ ಹರೀಶ್ ಅವರು ಪೂರಕ ಮಾಹಿತಿ ನೀಡಿದರು. ಪುರಸಭಾ ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸ್ಥಾಯಿ ಸಮಿತಿಯ ಸಭೆಯಲ್ಲಿ ಪ್ರಸ್ತಾಪಗೊಂಡ ತ್ಯಾಜ್ಯ ವಿಲೇವಾರಿ ಸಮಸ್ಯೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*