ಬಂಟ್ವಾಳ

ಆಧಾರ್ ಆದಾಲತ್ ಅವಧಿ ವಿಸ್ತರಿಸುವಂತೆ ಎಸ್.ಡಿ.ಪಿ.ಐ ಮನವಿ

ಆಧಾರ್ ಕಾರ್ಡ್ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಬಂಟ್ವಾಳ ತಾಲೂಕು ಮಟ್ಟದಲ್ಲಿ ಆಯೋಜಿಸಿದ ಆಧಾರ್ ಆದಾಲತ್ ಸಪ್ತಾಹ ಶನಿವಾರ ಕೊನೆಗೊಂಡಿದೆ. ಆದರೆ ಇದನ್ನು ವಿಸ್ತರಿಸಬೇಕು ಎಂದು ಎಸ್.ಡಿ.ಪಿ.ಐ. ಮನವಿ ಮಾಡಿದೆ.

ಜಾಹೀರಾತು

16 ರಿಂದ ಆರಂಭಗೊಂಡು  ಜುಲೈ 21 ರ ವರೆಗೆ ನಡೆದ ಈ ಅದಾಲತ್ ನಲ್ಲಿ ಹಲವು ಸಮಸ್ಯೆಗಳು ಪರಿಹಾರವಾಗಿವೆ. ಆದರೆ ಆಧಾರ್ ಸಂಬಂಧಿತ ಸಮಸ್ಯೆ ಹೊಂದಿರುವವರ ಸಂಖ್ಯೆಯು ಬಹಳಷ್ಟಿದ್ದು, ಅವರೆಲ್ಲರಿಗೂ ಆದಾಲತ್ ನಲ್ಲಿ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಆ ನಿಟ್ಟಿನಲ್ಲಿ ಸಾರ್ವಜನಿಕರ ಪರವಾಗಿ ಸೋಶಿಯಲ್ ಡೇಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷ ಮೊನೀಶ್ ಆಲಿ ನೇತೃತ್ವದ ನಿಯೋಗ ಬಂಟ್ವಾಳ ತಹಶೀಲ್ದಾರ್ ಅವರನ್ನು ಭೇಟಿಯಾಗಿ ಮನವಿ ಅರ್ಪಿಸಿತು.

ಅದಾಲತ್ ಅನ್ನು ಕನಿಷ್ಠ ಇನ್ನೂ ಒಂದು ವಾರಗಳ ಕಾಲ ನಡೆಸಿ ಇನ್ನಷ್ಟು ಮಂದಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ಕೋರಿತು.

ಮನವಿಯನ್ನು ಸ್ವೀಕರಿಸಿದ ಬಂಟ್ವಾಳ ತಾಲೂಕು ತಹಶಿಲ್ದಾರರು, ಸದ್ರಿ ವಿಚಾರವನ್ನು  ಮಾನ್ಯ ದ.ಕ ಜಿಲ್ಲಾ ಜಿಲ್ಲಾಧಿಕಾರಿಯವರ ಗಮನಕ್ಕೆ ತಂದು ಈ ನಿಟ್ಟಿನಲ್ಲಿ ಪ್ರಯತ್ನಿಸುವ ಭರವಸೆ ನೀಡಿದ್ದಾರೆ.

ಜಾಹೀರಾತು

ನಿಯೋಗದಲ್ಲಿ ಪುರಸಭಾ ಸಮಿತಿ ಕಾರ್ಯದರ್ಶಿ ಸಿದ್ದೀಕ್ ನಂದರಬೆಟ್ಟು, ಜೊತೆ ಕಾರ್ಯದರ್ಶಿ ಅನ್ವರ್ ಆಲಡ್ಕ, ಸಮಿತಿ ಸದಸ್ಯ ಇಬ್ರಾಹಿಂ ಖಲೀಲ್, ಬ್ರಾಂಚ್ ಮಟ್ಟದ ನಾಯಕರುಗಳಾದ ರಿಜ್ವಾನ್ ಅಕ್ಕರಂಗಡಿ,  ಇರ್ಷಾದ್ ಬಂಟ್ವಾಳ, ಇಕ್ಬಾಲ್ ಬಂಟ್ವಾಳ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ