ಬಂಟ್ವಾಳ

ರೋಟರಿ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಆಯೋಜನೆ: ಮಂಜುನಾಥ ಆಚಾರ್ಯ

ದ.ಕ.ಅಮೆಚೂರ್ ಕಬಡ್ಡಿ ಎಸೋಸಿಯೇಶನ್ ಮತ್ತು ಬಂಟ್ವಾಳ ತಾಲೂಕು ಅಮೆಚೂರ್ ಕಬಡ್ಡಿ ಎಸೋಸಿಯೇಶನ್‌ನ ವಾರ್ಷಿಕ ಮಹಾಸಭೆ ಬಿ.ಸಿ.ರೋಡ್ ರೋಟರಿ ಬಾಲ ಭವನ ಸಭಾಂಗಣದಲ್ಲಿ ಭಾನುವಾರ ನಡೆಯಿತು.


ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ ಆಚಾರ್ಯ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮ್ಮ ನೆಲದ ನೆಚ್ಚಿನ ಕ್ರೀಡೆಯಾದ ಕಬಡ್ಡಿಯನ್ನು ಎಲ್ಲರೂ ಪ್ರೀತಿಸಬೇಕು.ಬಂಟ್ವಾಳ ರೋಟರಿ ಕ್ಲಬ್ 50ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಬಂಟ್ವಾಳದಲ್ಲಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಆಯೋಜಿಸಲಾಗುವುದು ಎಂದು ಹೇಳಿದರು.

ಜಾಹೀರಾತು

ಜಿ.ಪಂ.ಸದಸ್ಯ, ಎಸೋಸಿಯೇಶನ್ ಉಪಾಧ್ಯಕ್ಷ, ಎಂ.ತುಂಗಪ್ಪ ಬಂಗೇರ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ, ಸಂಘ ಸಂಸ್ಥೆಗಳು ದೇಶೀ ಕ್ರೀಡೆಯಾದ ಕಬಡ್ಡಿ ಪಂದ್ಯಾಟಗಳನ್ನು ಸಂಘಟಿಸಿ ಕಬಡ್ಡಿ ಆಟಗಾರರರಿಗೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.

ಎಸೋಸಿಯೇಶನ್ ಅಧ್ಯಕ್ಷ ಪ್ರಕಾಶ ಕಾರಂತ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ಎಸೋಸಿಯೇಷನ್ ನಿಂದ ಕಬಡ್ಡಿಯಲ್ಲಿ ಉತ್ತಮ ಸಾಧನೆ ಮಾಡಿದವರನ್ನು ಗುರುತಿಸಿ, ಗೌರವಿಸಲಾಗಿದೆ ಎಂದು ಹೇಳಿದರು.
ಅಮೆಚೂರ್ ಕಬಡ್ಡಿ ಎಸೋಸಿಯೇಶನ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ, ಅಂತಾರಾಷ್ಟ್ರೀಯ ಆಟಗಾರ ಉದಯ ಚೌಟ ಮಾತನಾಡಿ ಕಬಡ್ಡಿಯಲ್ಲಿ ತೊಡಗಿಸಿಕೊಂಡು ಸಾಧನೆ ಮಾಡಿದಾಗ ಸಂಪಾದನೆಯಾಗುತ್ತದೆ ಎಂದು ಹೇಳಿದರು.ಎಸೋಸಿಯೇಶನ್ ಜಿಲ್ಲಾ ಧ್ಯಕ್ಷ ರತನ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಪೂಜಾರಿ, ಸಲಹೆಗಾರ ಕೃಷ್ಣಪ್ಪ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕಬಡ್ಡಿಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಾದ ಪಾಂಡುರಂಗ ಹನುಮಂತಪ್ಪ ಬಾವಿ, ಮಲ್ಲಿಕಾರ್ಜುನ ಭರಮಪ್ಪ ಗಾಣಿಗೇರ, ಸಿದ್ದಪ್ಪ ಫಕೀರಪ್ಪ ಜಲಗೇರ, ಸುಶ್ಮಿತಾ, ಮೊದಿನ್ ಬಾದ್‌ಷಾ ಹಾಗೂ ತರಬೇತುದಾರ ಆಸಿಫ್ ಪಡಂಗಡಿ, ತೀರ್ಪುಗಾರರ ಮಂಡಳಿ ಜಿಲ್ಲಾ ಸಂಚಾಲಕರಾಗಿ ಆಯ್ಕೆಯಾದ ಕೃಷ್ಣಪ್ಪ ಪೂಜಾರಿ ಅವರನ್ನು ಸಮ್ಮಾನಿಸಲಾಯಿತು. ಸಂಘಟಕರಾದ ಹಸೈನಾರ್ ಕುಕ್ಕಾಜೆ, ಸುದೀಪ್ ಶೆಟ್ಟಿ ಕೊಡಾಜೆ, ತುಂಗಪ್ಪ ಬಂಗೇರ, ಲತೀಫ್ ನೇರಳಕಟ್ಟೆ ಅವರನ್ನು ಅಭಿನಂದಿಸಲಾಯಿತು. ನಿಧನ ಹೊಂದಿದ ಕಬಡ್ಡಿ ಆಟಗಾರ ದೀಕ್ಷಿತ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಮುಂದಿನ ಸಾಲಿನ ನೂತನ ಕಾರ್ಯಕಾರಿ ಸಮಿತಿಯನ್ನು ಆಯ್ಕೆಮಾಡಲಾಯಿತು. ಕಾರ್ಯಾಧ್ಯಕ್ಷ ಬೇಬಿ ಕುಂದರ್ ಸ್ವಾಗತಿಸಿದರು.ಬಾಲಕೃಷ್ಣ ನರಿಕೊಂಬು ವರದಿ ವಾಚಿಸಿದರು. ತಾಲೂಕು ಕೋಶಾಽಕಾರಿ ಬಾಬು ಮಾಸ್ಟರ್ ಲೆಕ್ಕ ಪತ್ರ ಮಂಡಿಸಿದರು. ನೂತನ ಕಾರ್ಯದರ್ಶಿ ಚಂದ್ರಶೇಖರ ಕರ್ಣ ವಂದಿಸಿದರು.ಕಾರ್ಯಕಾರಿ ಸದಸ್ಯ ಸೇಸಪ್ಪ ಮಾಸ್ಟರ್ ಅತಿಥಿಗಳನ್ನು ಪರಿಚಯಿಸಿದರು

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.