ಬಂಟ್ವಾಳ ತಾಲೂಕಿನಲ್ಲಿ ಇಡೀ ದಿನ ಮಳೆ ಸುರಿಯದಿದ್ದರೂ ಆಗಾಗ್ಗೆ ಗಾಳಿ ಮಳೆ ಸುರಿದು ಹಾನಿ ಸಂಭವಿಸಿದೆ. ಬಿ.ಮೂಡ ಗ್ರಾಮದ ಪೊಟ್ಟಕೋಡಿ ಎಂಬಲ್ಲಿ ಮನೆಯೊಂದಕ್ಕೆ ತೆಂಗಿನ ಮರ ಬಿದ್ದ ಘಟನೆ ಸೋಮವಾರ ಸಂಜೆ ನಡೆಯಿತು.
ಇಲ್ಲಿನ ಅಂತಪ್ಪ ಪೂಜಾರಿ ಅವರ ಪತ್ನಿ ರಾಧಾ ಎಂಬವರ ಮನೆಗೆ ತೆಂಗಿನ ಮರ ಬಿದ್ದಿದೆ. ಘಟನೆಯಿಂದ ಸುಮಾರು 50 ಸಾವಿರ ರೂ ನಷ್ಟ ಆಗಿರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಶಿವಾನಂದ ನಾಟೆಕಾರ್, ಪ್ರದೀಪ್, ಸಿಬ್ಬಂದಿ ಸದಾಶಿವ ಕೈಕಂಬ, ಪುರಸಭಾ ಸದಸ್ಯ ಸದಾಶಿವ ಬಂಗೇರ, ಸ್ಥಳೀಯರಾದ ಕೇಶವ ದೈಪಲ ಮೊದಲಾದವರು ಭೇಟಿ ನೀಡಿದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)