ಪ್ರಮುಖ ಸುದ್ದಿಗಳು

ಹಾಸನ ಜಿಲ್ಲೆಯಲ್ಲಿ ಕಾಲ್ನಡಿಗೆ ಜಾಥಾ

ಸರಕಾರಿ ಶಾಲೆ ಉಳಿಸಿ ಆಂದೋಲನ ಹಾಗೂ ಹೊಸ ಶಿಕ್ಷಣ ನೀತಿಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಸೆ. 8ರಂದು ಬೆಂಗಳೂರಿನಲ್ಲಿ ನಡೆಯುವ ಕಾಲ್ನಡಿಗೆ ಜಾಥಕ್ಕೆ ಪೂರ್ವಭಾವಿಯಾಗಿ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್ ಹಾಗೂ ಶಿಕ್ಷಣ ಪ್ರೇಮಿ ಅನಿಲ್ ಶೆಟ್ಟಿ ಬೆಂಗಳೂರು ನೇತೃತ್ವದ ತಂಡ ಸೋಮವಾರ ಹಾಸನ ಜಿಲ್ಲೆಯ ಸರಕಾರಿ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಅಧ್ಯಯನ ನಡೆಸಿತು.

ಜಾಹೀರಾತು

ಸಕಲೇಶಪುರದ ಬಾಳ್ಳುಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸ.ಹಿ.ಪ್ರ.ಶಾಲೆ ಬೆಳಗೋಡು, ಸ.ಹಿ.ಪ್ರಾ.ಶಾಲೆ ಪಾಳ್ಯ, ಸ.ಹಿ.ಪ್ರಾ.ಶಾಲೆ ಆಲೂರು ಇಲ್ಲಿಗೆ ಭೇಟಿ ನೀಡಿ ಪೋಷಕರ ಸಭೆ ನಡೆಸಿ ಸರಕಾರಿ ಶಾಲೆ ಉಳಿಸುವ ಬಗ್ಗೆ ಚರ್ಚೆ ನಡೆಸಲಾಯಿತು. ಸೆ. 8 ರಂದು ನಡೆಯಲಿರುವ ಕಾಲ್ನಡಿಗೆ ಜಾಥಕ್ಕೆ ಬೆಂಬಲ ಕೋರಲಾಯಿತು.

ಬಳಿಕ ಆಲೂರು ಶಾಸಕ ಎಚ್.ಕೆ.ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಸರಕಾರಿ ಶಾಲೆ ಉಳಿಸುವ ಅಂಗವಾಗಿ ಹಮ್ಮಿಕೊಂಡ ಮಿಸ್ಡ್ ಕಾಲ್ ಅಭಿಯಾನದ ಉದ್ದೇಶದ ಬಗ್ಗೆ ತಿಳಿಸಲಾಯಿತು. ಸ್ವತಃ ಶಾಸಕರು ಮಿಸ್ ಕಾಲ್ ನೀಡುವ ಮೂಲಕ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದರಲ್ಲದೆ ಈ ಬಗ್ಗೆ ವಿಧಾನಸಭೆಯಲ್ಲಿ ಧ್ವನಿ ಎತ್ತುವ ಬಗ್ಗೆ ಭರವಸೆ ನೀಡಿದರು.

ಈ ಸಂದರ್ಭ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್, ಸದಸ್ಯರಾದ ಪುರುಷೋತ್ತಮ ಅಂಚನ್, ರಾಮಚಂದ್ರ ಪೂಜಾರಿ ಕರೆಂಕಿ, ದೀಪಕ್ ಸಾಲ್ಯಾನ್, ಮಹೇಶ್, ಅನಿಲ್ ಶೆಟ್ಟಿ, ಸಕಲೇಶಪುರ ತಾ.ಪಂ.ಉಪಾಧ್ಯಕ್ಷ ಮಂಜುನಾಥ್, ಜಗನ್ನಾಥ ಸಕಲೇಶ್ ಪುರ, ಸುರೇಶ್, ಫಾಲಾಕ್ಷ, ವನಜ, ಮತ್ತಿತರರು ಹಾಜರಿದ್ದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ