ಕಲ್ಲಡ್ಕ

ಕಲ್ಲಡ್ಕದಲ್ಲಿ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಕೂಟ

 

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಮೈದಾನದಲ್ಲಿ ಸೋಮವಾರ ವಿದ್ಯಾಭಾರತಿಯ ಕರ್ನಾಟಕ ಪ್ರಾಂತಕ್ಕೊಳಪಟ್ಟ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ನಡೆಯಿತು.

ಜಾಹೀರಾತು

ಈ ಸಂದರ್ಭ ಕಾರ್ಯಕ್ರಮವನ್ನು ಹಿರಿಯ ಕಬಡ್ಡಿ ಆಟಗಾರರಾದ ವೆಂಕಟ್ರಮಣ ಬಳ್ಳುಕರಾಯ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ವಹಿಸಿದ್ದರು. ವಿದ್ಯಾಭಾರತಿ ಪ್ರಾಂತ ಕಾರ್ಯದರ್ಶಿ ವಸಂತ ಮಾಧವ, ಶ್ರೀರಾಮ ವಿದ್ಯಾಕೇಂದ್ರದ ಸಹಸಂಚಾಲಕ ರಮೇಶ್ ಎನ್, ವಿದ್ಯಾಭಾರತಿ ಪ್ರಾಂತ ನೈತಿಕ, ಆಧ್ಯಾತ್ಮಿಕ ವಿಷಯ ಪ್ರಮುಖರಾದ ವೆಂಕಟ್ರಮಣ ರಾವ್ ಈ ಸಂದರ್ಭ ಉಪಸ್ಥಿತರಿದ್ದರು. ಮಧ್ಯಾಹ್ನದ ವೇಳೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಕಬಡ್ಡಿ ಪಂದ್ಯಾಕೂಟವನ್ನು ವೀಕ್ಷಿಸಿದರು.

ಕಾರ್ಯಕ್ರಮವನ್ನು ಜಿನ್ನಪ್ಪ ಏಳ್ತಿಮಾರ್ ನಿರೂಪಿಸಿದರು. ಮನೋಜ್ ರೈ ಸ್ವಾಗತಿಸಿದರು. ಗೋಪಾಲ ಎಂ. ವಂದಿಸಿದರು. 18 ಜಿಲ್ಲೆಗಳಿಂದ ಕಬಡ್ಡಿ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿವೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ