ಬಂಟ್ವಾಳ

ಫೊಟೋಗ್ರಾಫರ್ಸ್ ಅಸೋಸಿಯೇಶನ್ ನ 19ನೇ ವಾರ್ಷಿಕ ಮಹಾಸಭೆ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ರಿ. ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆ ಇದರ ಬಂಟ್ವಾಳ ವಲಯದ ೧೯ನೇ ವಾರ್ಷಿಕ ಮಹಾಸಭೆಯು ಬಿ.ಸಿ.ರೋಡಿನ ಲಯನ್ಸ್ ಕ್ಲಬ್ ನ ಹಾಲ್ ನಲ್ಲಿ ವಲಯಾಧ್ಯಕ್ಷ ಹರೀಶ್ ಮಾಣಿ ಅಧ್ಯಕ್ಷತೆಯಲ್ಲಿ ನಡೆಯಿತು.

ಜಾಹೀರಾತು

ಮಹಾಸಭೆಯನ್ನು ಜಿಲ್ಲಾ ಅಧ್ಯಕ್ಷರಾದ ವಿಲ್ಸನ್ ಗೋನ್ಸಾಲ್ವಿಸ್ ಅವರು ಉದ್ಘಾಟಿಸಿ, ಇಂದಿನ ದಿನಗಳಲ್ಲಿ ಛಾಯಾಗ್ರಾಹಕರು ಎದುರಿಸುತ್ತಿರುವ ಸಮಸ್ಯೆ ಕುರಿತು ಮಾಹಿತಿ ನೀಡಿ ಸಂಘಟನೆ ಅವಶ್ಯದ ಕುರಿತು ವಿವರಿಸಿದರು.

ವಲಯ ಗೌರವಾಧ್ಯಕ್ಷ ಸುಕುಮಾರ್ ಬಂಟ್ವಾಳ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ್, ಜಿಲ್ಲಾ ಸಮಿತಿಯ ಉಪಾಧ್ಯಕ್ಷಾರದ ಸುಧೀರ್ ಶೆಟ್ಟಿ ಮತ್ತು ಬ್ಯಾಂಕಿನ ನಿರ್ದೇಶಕ ಹರೀಶ್ ರಾವ್ ಹಾಗೂ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು. ನೂತನವಾಗಿ ಮನೆ ನಿರ್ಮಿಸಿದ ಸದಸ್ಯರನ್ನು ಅಭಿನಂದಿಸಲಾಯಿತು.ನೂತನವಾಗಿ ಸ್ಡುಡಿಯೋ ಮಾಡಿದ ಸದಸ್ಯರನ್ನು ಅಭಿನಂದಿಸಲಾಯಿತು.

ಗೌರವಾಧ್ಯಕ್ಷ ಸುಕುಮಾರ್ ಬಂಟ್ವಾಳ್ ಸ್ವಾಗತಿಸಿದರು. ಉಪಾಧ್ಯಕ್ಷರಾದ ಹರೀಶ್ ಕುಂದರ್ ಗತ ವರ್ಷದ ವರದಿ ಮಂಡಿಸಿದರು. ಪ್ರಧಾನ ಕಾರ್ಯದರ್ಶಿ ರೋಶನ್ ಕಲ್ಲಡ್ಕ ವಾರ್ಷಿಕ ವರದಿ ಮಂಡಿಸಿ ಕೋಶಾಧಿಕಾರಿ ಬಾಲಕ್ರಷ್ಣ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಕ್ರೀಡಾ ಕಾರ್ಯದರ್ಶಿ ರಿಚ್ಚರ್ಡ್ ವಾಮದಪದವು ಧನ್ಯವಾದವಿತ್ತರು, ಎಚ್.ಕೆ.ನಯನಾಡು ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts