ವರ್ಷಧಾರೆಯ ದೂಷಿಸದಿರಿ; ಮುಂಜಾಗ್ರತೆ ವಹಿಸಿರಿ

  • ಮೇಧಾ ರಾಮಕುಂಜ

ಮಳೆ ಎಂದರೆ ಸಮೃದ್ಧಿಯ ಸಂಕೇತ. ಜೀವಿಗಳಿಗೆ ಹೊಸ ಚೇತನಾಶಕ್ತಿಯನ್ನು ಕೊಡುವ ಮಳೆ, ನೀರಿಗೆ ಚಲನಶೀಲತೆಯನ್ನು ನೀಡುತ್ತದೆ. ಸಂಸ್ಕೃತದಲ್ಲಿ ವರ್ಷ ಎಂದು, ತುಳುವಿನಲ್ಲಿ ಬರ್ಸ ಎಂದೂ ಕರೆಯಲ್ಪಡುವ ಮಳೆಗೆ ಯಾವುದೇ ರೀತಿಯ ಕಟ್ಟುಪಾಡುಗಳಿಲ್ಲ. ಈ ಬಾರಿ ಸ್ವಲ್ಪ ಜೋರಾಗಿಯೇ ಸುರಿಯುತ್ತಿರುವ ಮಳೆ ಎಲ್ಲರಿಗೂ ಖುಷಿ ನೀಡುತ್ತಿದೆ. ಆದರೆ ಮಳೆಗಾಲದಲ್ಲಿ ಸಾಮಾನ್ಯವಾಗಿ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಕಾಡುತ್ತವೆ.

ಜಾಹೀರಾತು

ಮಳೆಗಾಲದಲ್ಲಿ ವಾತಾವರಣ ಬದಲಾಗುತ್ತಲೇ ಇರುವುದರಿಂದ ದೇಹದ ಆರೋಗ್ಯ ಸ್ಥಿರವಾಗಿರುವುದಿಲ್ಲ. ನೆಗಡಿ, ಕೆಮ್ಮು ಮತ್ತು ಜ್ವರದ ಸಮಸ್ಯೆಗಳು ಎದುರಾಗಬಹುದು. ಡೆಂಗ್ಯೂ, ಮಲೇರಿಯಾದಂಥ ಸಾಂಕ್ರಾಮಿಕ ರೋಗಗಳು ಕಾಡಬಹುದು. ಅಲರ್ಜಿ, ಅಸ್ತಮಾ ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಅರೋಗ್ಯ ಸಮಸ್ಯೆಗಳು ಉಲ್ಬಣಿಸುವ ಸಂಭವವಿರುತ್ತದೆ. ಪಾಚಿ ಕಟ್ಟಿರುವುದರಿಂದ ಜಾರಿ ಬೀಳುವ ಹಾಗೂ ವಾಹನಗಳು ಸ್ಕಿಡ್ ಆಗುವ ಸಾಧ್ಯತೆಗಳು ಅಧಿಕವಾಗಿರುತ್ತದೆ. ವಿಷಯುಕ್ತ ಜಂತುಗಳು ಹಾಗೂ ಹಾವುಗಳು ಬೆಚ್ಚನೆಯ ಸ್ಥಳವನ್ನು ಅರಸಿಕೊಂಡು ಮನೆಯ ಯಾವುದಾದರೊಂದು ಮೂಲೆಯಲ್ಲಿ ಸೇರಿಕೊಳ್ಳುತ್ತವೆ. ಅವುಗಳ ಕಡೆಗೆ ಗಮನವಿರಲಿ.

ಮುನ್ನೆಚ್ಚರಿಕಾ ಕ್ರಮವಾಗಿ ಮಳೆಗಾಲದಲ್ಲಿ ಸುತ್ತಮುತ್ತಲಿನ ಪರಿಸರದ ಶುಚಿತ್ವ ಕಾಪಾಡಿಕೊಳ್ಳಬೇಕು. ತೆಂಗಿನಕಾಯಿ ಚಿಪ್ಪು, ಟಯರ್ ಹಾಗೂ ಇತರೆ ವಸ್ತುಗಳಲ್ಲಿ ನೀರು ನಿಂತು ಸೊಳ್ಳೆಗಳು ಹೆಚ್ಚಾಗುತ್ತವೆ. ಹಾಗಾಗಿ ಎಲ್ಲಿಯೂ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಮಳೆಯಲ್ಲಿ ನೆನೆಯುವುದು ಆ ಕ್ಷಣಕ್ಕೆ ಖುಷಿ ನೀಡಿದರೂ ಮುಂದಕ್ಕೆ ಆರೋಗ್ಯ ಹದಗೆಡಬಹುದು. ಹಾಗಾಗಿ ಒದ್ದೆಯಾಗದೇ ಇದ್ದರೆ ಉತ್ತಮ.

ಬೆಚ್ಚನೆಯ ಉಡುಪು ಧರಿಸಿ, ಆದಷ್ಟು ಕಾಯಿಸಿದ ನೀರು ಹಾಗೂ ಬಿಸಿ ಮಾಡಿದ ಆಹಾರ ಪದಾರ್ಥ ಸೇವಿಸಬೇಕು. ಹೊರಗಿನ ಜಂಕ್ ಫುಡ್ ಅಥವಾ ಜಿಡ್ಡಿನ ಆಹಾರ ಸೇವನೆಯ ಬದಲು ಮನೆಯಲ್ಲೇ ತಯಾರಿಸಿದ ಆಹಾರ ಸೇವನೆ ಉತ್ತಮ. ನಿಧಾನವಾಗಿ ವಾಹನ ಚಲಾಯಿಸಿದರೆ ಅಪಘಾತವಾಗುವ ಅಪಾಯವೂ ಇರುವುದಿಲ್ಲ. ಆದ್ದರಿಂದ ಮಳೆಗಾಲದಲ್ಲಿ ಹದಗೆಡುವ ಆರೋಗ್ಯಕ್ಕೆ ಜೋರಾಗಿ ಸುರಿಯುವ ಮಳೆಯನ್ನು ದೂರದೇ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡರೆ ಸ್ಥಿರ ಆರೋಗ್ಯ ನಮ್ಮದಾಗುತ್ತದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ವರ್ಷಧಾರೆಯ ದೂಷಿಸದಿರಿ; ಮುಂಜಾಗ್ರತೆ ವಹಿಸಿರಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*