ಯುವಲಹರಿ

ವರ್ಷಧಾರೆಯ ದೂಷಿಸದಿರಿ; ಮುಂಜಾಗ್ರತೆ ವಹಿಸಿರಿ

  • ಮೇಧಾ ರಾಮಕುಂಜ

ಮಳೆ ಎಂದರೆ ಸಮೃದ್ಧಿಯ ಸಂಕೇತ. ಜೀವಿಗಳಿಗೆ ಹೊಸ ಚೇತನಾಶಕ್ತಿಯನ್ನು ಕೊಡುವ ಮಳೆ, ನೀರಿಗೆ ಚಲನಶೀಲತೆಯನ್ನು ನೀಡುತ್ತದೆ. ಸಂಸ್ಕೃತದಲ್ಲಿ ವರ್ಷ ಎಂದು, ತುಳುವಿನಲ್ಲಿ ಬರ್ಸ ಎಂದೂ ಕರೆಯಲ್ಪಡುವ ಮಳೆಗೆ ಯಾವುದೇ ರೀತಿಯ ಕಟ್ಟುಪಾಡುಗಳಿಲ್ಲ. ಈ ಬಾರಿ ಸ್ವಲ್ಪ ಜೋರಾಗಿಯೇ ಸುರಿಯುತ್ತಿರುವ ಮಳೆ ಎಲ್ಲರಿಗೂ ಖುಷಿ ನೀಡುತ್ತಿದೆ. ಆದರೆ ಮಳೆಗಾಲದಲ್ಲಿ ಸಾಮಾನ್ಯವಾಗಿ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಕಾಡುತ್ತವೆ.

ಜಾಹೀರಾತು

ಮಳೆಗಾಲದಲ್ಲಿ ವಾತಾವರಣ ಬದಲಾಗುತ್ತಲೇ ಇರುವುದರಿಂದ ದೇಹದ ಆರೋಗ್ಯ ಸ್ಥಿರವಾಗಿರುವುದಿಲ್ಲ. ನೆಗಡಿ, ಕೆಮ್ಮು ಮತ್ತು ಜ್ವರದ ಸಮಸ್ಯೆಗಳು ಎದುರಾಗಬಹುದು. ಡೆಂಗ್ಯೂ, ಮಲೇರಿಯಾದಂಥ ಸಾಂಕ್ರಾಮಿಕ ರೋಗಗಳು ಕಾಡಬಹುದು. ಅಲರ್ಜಿ, ಅಸ್ತಮಾ ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಅರೋಗ್ಯ ಸಮಸ್ಯೆಗಳು ಉಲ್ಬಣಿಸುವ ಸಂಭವವಿರುತ್ತದೆ. ಪಾಚಿ ಕಟ್ಟಿರುವುದರಿಂದ ಜಾರಿ ಬೀಳುವ ಹಾಗೂ ವಾಹನಗಳು ಸ್ಕಿಡ್ ಆಗುವ ಸಾಧ್ಯತೆಗಳು ಅಧಿಕವಾಗಿರುತ್ತದೆ. ವಿಷಯುಕ್ತ ಜಂತುಗಳು ಹಾಗೂ ಹಾವುಗಳು ಬೆಚ್ಚನೆಯ ಸ್ಥಳವನ್ನು ಅರಸಿಕೊಂಡು ಮನೆಯ ಯಾವುದಾದರೊಂದು ಮೂಲೆಯಲ್ಲಿ ಸೇರಿಕೊಳ್ಳುತ್ತವೆ. ಅವುಗಳ ಕಡೆಗೆ ಗಮನವಿರಲಿ.

ಮುನ್ನೆಚ್ಚರಿಕಾ ಕ್ರಮವಾಗಿ ಮಳೆಗಾಲದಲ್ಲಿ ಸುತ್ತಮುತ್ತಲಿನ ಪರಿಸರದ ಶುಚಿತ್ವ ಕಾಪಾಡಿಕೊಳ್ಳಬೇಕು. ತೆಂಗಿನಕಾಯಿ ಚಿಪ್ಪು, ಟಯರ್ ಹಾಗೂ ಇತರೆ ವಸ್ತುಗಳಲ್ಲಿ ನೀರು ನಿಂತು ಸೊಳ್ಳೆಗಳು ಹೆಚ್ಚಾಗುತ್ತವೆ. ಹಾಗಾಗಿ ಎಲ್ಲಿಯೂ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಮಳೆಯಲ್ಲಿ ನೆನೆಯುವುದು ಆ ಕ್ಷಣಕ್ಕೆ ಖುಷಿ ನೀಡಿದರೂ ಮುಂದಕ್ಕೆ ಆರೋಗ್ಯ ಹದಗೆಡಬಹುದು. ಹಾಗಾಗಿ ಒದ್ದೆಯಾಗದೇ ಇದ್ದರೆ ಉತ್ತಮ.

ಬೆಚ್ಚನೆಯ ಉಡುಪು ಧರಿಸಿ, ಆದಷ್ಟು ಕಾಯಿಸಿದ ನೀರು ಹಾಗೂ ಬಿಸಿ ಮಾಡಿದ ಆಹಾರ ಪದಾರ್ಥ ಸೇವಿಸಬೇಕು. ಹೊರಗಿನ ಜಂಕ್ ಫುಡ್ ಅಥವಾ ಜಿಡ್ಡಿನ ಆಹಾರ ಸೇವನೆಯ ಬದಲು ಮನೆಯಲ್ಲೇ ತಯಾರಿಸಿದ ಆಹಾರ ಸೇವನೆ ಉತ್ತಮ. ನಿಧಾನವಾಗಿ ವಾಹನ ಚಲಾಯಿಸಿದರೆ ಅಪಘಾತವಾಗುವ ಅಪಾಯವೂ ಇರುವುದಿಲ್ಲ. ಆದ್ದರಿಂದ ಮಳೆಗಾಲದಲ್ಲಿ ಹದಗೆಡುವ ಆರೋಗ್ಯಕ್ಕೆ ಜೋರಾಗಿ ಸುರಿಯುವ ಮಳೆಯನ್ನು ದೂರದೇ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡರೆ ಸ್ಥಿರ ಆರೋಗ್ಯ ನಮ್ಮದಾಗುತ್ತದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Share
Published by
Harish Mambady

Recent Posts