ಬಂಟ್ವಾಳ

ಕಾಂಗ್ರೆಸ್ ನಿಂದ ಪುರಸಭೆಗೆ ಗರಿಷ್ಠ ಅನುದಾನ: ರಮಾನಾಥ ರೈ


ಬಂಟ್ವಾಳ ಪುರಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬುಧವಾರ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಸಭೆಯನ್ನು ಬಿ.ಸಿ.ರೋಡಿನ ಲಯನ್ಸ್ ಸಭಾಭವನದಲ್ಲಿ ನಡೆಸಿತು.

ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ನಡೆದ ಪುರಸಭೆ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ರೈ, ಭೂ ಮಸೂದೆ, ನಿವೇಶನ ಇನ್ನಿತರ ಪ್ರಮುಖ ಕಾರ್ಯಕ್ರಮಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಯೋಜನವಾಗಿದೆ ಎಂದರು.
ನಗರೋತ್ಥಾನ ಯೋಜನೆಯಿಂದ ಹೆಚ್ಚುವರಿ ಅನುದಾನ ಬಂದಿದೆ ಎಂದು ಹೇಳಿದ ರೈ, ಪುರಸಭಾ ವ್ಯಾಪ್ತಿಯಲ್ಲಿ ಹಲವಾರು ಪ್ರಮುಖ ರಸ್ತೆಗಳಾದ ಮೆಲ್ಕಾರ್, ಮೊಡಂಕಾಪು , ಗೂಡಿನಬಳಿ, ಬಂಟ್ವಾಳ ಸೇತುವೆ, ಪಾಣೆಮಂಗಳೂರು ಸೇತುವೆ , ಪಲ್ಲಮಜಲು ರಸ್ತೆ , ಪರ್ಲಿಯಾ-ಶಾಂತಿಯಂಗಡಿ-ಎಂ.ಕೆ.ಟವರ್ ರಸ್ತೆ ಡಾಮರೀಕರಣಗೊಂಡಿದೆ. ಪುರಸಭೆಗೆ ಜೆಸಿಬಿ ಮತ್ತು ಟಿಪ್ಪರ್ ಒದಗಿಸಲಾಗಿದೆ. ಬಂಟ್ವಾಳ ಜಂಕ್ಷನ್ ನಲ್ಲಿ ಸುಸಜ್ಜಿತವಾದ ಸುಂದರವಾದ ಉದ್ಯಾನವನ ನಿರ್ಮಿಸಲಾಗಿದೆ. ಮೆಸ್ಕಾಂ, ಕೆಎಸಾರ್‍ಟಿಸಿ, ಮಿನಿ ವಿಧಾನಸೌಧ, ೫೨ ಕೋಟಿ ರೂ.ಯ ಕುಡಿಯುವ ನೀರಿನ ಯೋಜನೆ, ಪಂಜೆ ಮಂಗೇಶರಾಯರ ಸ್ಮಾರಕ ಭವನ, ಅಂಬೇಡ್ಕರ್ ಸಮುದಾಯ ಭವನ, ಸರಕಾರಿ ಆಸ್ಪತ್ರೆ ಕಟ್ಟಡ, ಪ್ರವಾಸಿ ಮಂದಿರ ಮತ್ತು ಸಾಲುಮರದ ತಿಮ್ಮಕ್ಕ ಉದ್ಯಾನವನಕ್ಕೆ ಹಿಂದಿನ ಅವಧಿಯಲ್ಲಿ ನಿರ್‍ಮಾಣ ಹಾಗೂ ಚಾಲನೆ ನೀಡಲಾಗಿದೆ ಎಂದು ರೈ ಹೇಳಿದರು.

ಜಾಹೀರಾತು

ಬೊಂಡಾಲ ಜಗನ್ನಾಥ ಶೆಟ್ಟಿ ಅವರು ಯುವ ನಾಯಕರಾಗಿ ವಿಧಾನ ಸಭೆ ಚುನಾವಣೆಗೆ ಸ್ಪರ್ಧಿಸಿ ಯುವಕರಿಗೆ ಪ್ರೇರಣೆಯಾಗಿದ್ದು ಪಕ್ಷಕ್ಕಾಗಿ ದುಡಿದವರು. ಅವರಿಗೂ ನುಡಿನಮನವನ್ನು ಸಲ್ಲಿಸುತ್ತಿದ್ದೇನೆ ಎಂದು ರೈ ಹೇಳಿದರು.

ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಎಂ.ಎಸ್.ಮಹಮ್ಮದ್, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಗೇರು ನಿಗಮ ಮಾಜಿ ಅಧ್ಯಕ್ಷ ಬಿ.ಎಚ್.ಖಾದರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಜಶೇಖರ್ ನಾಯಕ್, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಜಿಲ್ಲಾ ಉಪಾಧ್ಯಕ್ಷ ಬೇಬಿ ಕುಂದರ್, ಸ್ಥಾಯಿ ಸಮಿತಿ ಅಧ್ಯಕ್ಷ ವಾಸು ಪುಜಾರಿ, ಬೂಡಾ ಅಧ್ಯಕ್ಷ ಸದಾಶಿವ ಬಂಗೇರಾ, ಬಂ.ಬ್ಲಾಕ್ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಲುಕ್ಮಾನ್, ತಾ.ಪಂ.ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಮಾಧವ ಮಾವೆ ಉಪಸ್ಥಿತರಿದ್ದರು. ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಅಬ್ಬಾಸ್ ಆಲಿ ಸ್ವಾಗತಿಸಿದರು. ಗೇರು ನಿಗಮದ ಮಾಜಿ ಸದಸ್ಯ ಜಗದೀಶ ಕೊಯಿಲ ವಂದಿಸಿದರು. ಕೊಡಾಜೆ ಬಾಲಕೃಷ್ಣ ಆಳ್ವ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ