ಬಂಟ್ವಾಳ

ಚಾಲ್ತಿ ಸಾಲ ಮನ್ನಾ ಮಾಡಲು ಒತ್ತಾಯ


2018, ಜುಲೈ 10ರವರೆಗೆ ಸಹಕಾರಿ ಸಂಸ್ಥೆಗಳ ಮೂಲಕ ಕೃಷಿ ಸಾಲ ಪಡೆದ ರೈತರ 1 ಲಕ್ಷ ರೂ ವರೆಗಿನ ಚಾಲ್ತಿ ಸಾಲ ಮನ್ನಾ ಮಾಡುವುದಾಗಿ ಸಿಎಂ ಘೋಷಿಸಿದ್ದರೂ ಬೆಲೆ ಇಲ್ಲದಂತಾಗಿದೆ ಎಂದು ತಾಪಂ ಸದಸ್ಯ ಪ್ರಭಾಕರ ಪ್ರಭು ಹೇಳಿದ್ದಾರೆ.


ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ಪ್ರಕಟಿಸಿದಂತೆ ರೈತರ ಸಂಪೂರ್ಣ ಸಾಲ ಮನ್ನಾ ಘೋಷಣೆ ಮತ್ತು ಮುಖ್ಯಮಂತ್ರಿಯಾಗಿ ನೀಡಿದ ಭರವಸೆಯಂತೆ ಬಜೆಟ್ ಅಧಿವೇಶನದಲ್ಲಿ ಚರ್ಚೆಗೆ ಉತ್ತರಿಸಿದ ಸಿಎಂ. 2018 ಜುಲೈ 10ರವರೆಗೆ ಸಹಕಾರಿ ಸಂಸ್ಥೆಗಳ ಮೂಲಕ ಕೃಷಿ ಸಾಲ ಪಡೆದ ರೈತರ ಒಂದು ಲಕ್ಷದವರೆಗಿನ ಚಾಲ್ತಿ ಸಾಲ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದರು. ಘೋಷಣೆಯಿಂದಾಗಿ ಜುಲೈ ೧೦ರವರೆಗಿನ ಬೆಳೆ ಸಾಲ ಪಡೆದ ರೈತರೂ ಸಹ ಸಾಲ ಮನ್ನಾ ನಿರೀಕ್ಷೆಯಲ್ಲಿದ್ದರು. ಆದರೆ ಸಹಕಾರ ಸಂಘಗಳ ನಿಬಂಧಕರ ಕಚೇರಿಯಿಂದ ಸಹಕಾರ ಸಂಘಗಳ ಅಪರ ನಿಬಂಧಕರು ಜುಲೈ ೬ರಂದು ಆರ್ಥಿಕ ಇಲಾಖೆಯ ಸೂಚನೆಯಂತೆ ಪತ್ರದಲ್ಲಿ ಕೋರಿರುವ ಮಾಹಿತಿಯಲ್ಲಿ ಜೂನ್ ೨೧ರಿಂದ ಜೂನ್ ೩೦ವರೆಗೆ ರೈತರು ಪಡೆದ ಸಾಲದ ವಿವರ ಕೇಳಿದೆ. ಇದು ಬಜೆಟ್ ನಲ್ಲಿ ಮಾಡಿದ ಘೋಷಣೆ ದಿನಾಂಕಕ್ಕೆ ವ್ಯತಿರಿಕ್ತವಾಗಿರುತ್ತದೆ. ಅಧಿವೇಶನ ಸಂದರ್ಭ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಿದ್ದಕ್ಕೆ ಬೆಲೆ ಇಲ್ಲದಂತಾಗಿದೆ ಎಂದು ಪ್ರಭು ತಿಳಿಸಿದ್ದಾರೆ.
೨೦೧೮ ಜುಲೈ ೧೦ರವರೆಗಿನ ಬೆಳೆ ಸಾಲ ಪಡೆದ ರೈತರು ಕಂಗಾಲಾಗಿದ್ದು,. ೨೦೧೮ ಜುಲೈ ೧೦ರವರೆಗಿನ ರೈತರು ಪಡೆದ ೧ ಲಕ್ಷದವರೆಗಿನ ಚಾಲ್ತಿ ಸಾಲಮನ್ನಾ ಮಾಡಲು ಆರ್ಥಿಕ ಇಲಾಖೆಗೆ ಸೂಚಿಸಲು ಅವರು ವಿನಂತಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ