ಪ್ರಮುಖ ಸುದ್ದಿಗಳು

ಆ. 15 ರಂದು ಕಡಬ, ಮೂಡಬಿದ್ರೆ ತಾಲೂಕು ಉದ್ಘಾಟನೆ

ನೂತನವಾಗಿ ಸ್ಥಾಪನೆಗೊಂಡಿರುವ ಕಡಬ ಹಾಗೂ ಮೂಡಬಿದ್ರೆ ತಾಲೂಕುಗಳ ಉದ್ಘಾಟನೆ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಂದು ನಡೆಯಲಿದೆ.
ಈ ಕುರಿತು ಅಧಿಕಾರಿಗಳ ಪೂರ್ವಸಿದ್ಧತಾ ಸಭೆ ಗುರುವಾರ ಅಪರ ಜಿಲ್ಲಾಧಿಕಾರಿ ಕುಮಾರ್ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು.

ಇದುವರೆಗೆ ದ.ಕ. ಜಿಲ್ಲೆಯಲ್ಲಿ ಐದು ತಾಲೂಕುಗಳು. ಅವು ಮಂಗಳೂರು, ಬಂಟ್ವಾಳ. ಬೆಳ್ತಂಗಡಿ, ಪುತ್ತೂರು ಮತ್ತು ಸುಳ್ಯ. ಅವುಗಳ ನಕ್ಷೆ ಇದು.

ಆಗಸ್ಟ್ 15 ರಂದು ಬೆಳಿಗ್ಗೆ 10.30 ಗಂಟೆಗೆ ಕಡಬ ತಾಲೂಕು ಹಾಗೂ ಸಂಜೆ 4 ಗಂಟೆಗೆ ಮೂಡಬಿದ್ರೆ ತಾಲೂಕು ಉದ್ಘಾಟನೆಯಾಗಲಿದೆ ಎಂದರು.  ಸರಕಾರದ ನಿರ್ದೇಶನದಂತೆ ತಾಲೂಕು ಮಟ್ಟದಲ್ಲಿ ಸ್ಥಾಪನೆಯಾಗಬೇಕಾದ ಎಲ್ಲಾ ಇಲಾಖೆಗಳ ಸರಕಾರಿ ಕಚೇರಿಗಳ ಸ್ಥಾಪನೆಗೆ ಆಯಾ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳು ಈಗಿನಿಂದಲೇ ಸಿದ್ಧತೆ ಮಾಡಬೇಕು. ಇದಕ್ಕಾಗಿ ಸೂಕ್ತ ಕಚೇರಿಯನ್ನು ಹುಡುಕಬೇಕು.  ತಾತ್ಕಾಲಿಕವಾಗಿ ಬಾಡಿಗೆ ಕಟ್ಟಡದಲ್ಲಿ ಕಚೇರಿ ಸ್ಥಾಪಿಸಿ, ಮುಂದಿನ ದಿನಗಳಲ್ಲಿ ಕಚೇರಿ ಕಟ್ಟಡ ನಿರ್ಮಿಸಲು ಸೂಕ್ತ ಭೂಮಿ ಗುರುತಿಸಬೇಕು. ಆಯಾ ಕಚೇರಿಗೆ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜಿಸಬೇಕು. ಪೂರ್ಣ ಪ್ರಮಾಣದ ಅಧಿಕಾರಿ ಇಲ್ಲದಿದ್ದರೆ ಪ್ರಭಾರ ವ್ಯವಸ್ಥೆ ಮಾಡಬೇಕು. ಎಲ್ಲಾ ಜಿಲ್ಲಾ ಮಟ್ಟದ ಇಲಾಖಾಧಿಕಾರಿಗಳು ಈ ಬಗ್ಗೆ ತ್ವರಿತವಾಗಿ ಗಮನಹರಿಸಿ ಸಿದ್ಧತಾ ಕಾರ್ಯ ಕೈಗೊಳ್ಳಬೇಕು  ಎಂದು ಅಪರ ಜಿಲ್ಲಾಧಿಕಾರಿಗಳು ಹೇಳಿದರು.
ಈಗಾಗಲೇ ಕಡಬ ಮತ್ತು ಮೂಡಬಿದ್ರೆಯಲ್ಲಿ ಮಿನಿವಿಧಾನಸೌಧ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇದರಲ್ಲಿ ತಾಲೂಕು ಕಚೇರಿ, ಸರ್ವೆ  ಇಲಾಖೆ, ಸಬ್ ರಿಜಿಸ್ಟ್ರಾರ್ ಹಾಗೂ ಖಜಾನೆ ಇಲಾಖೆ ಇರಲಿದೆ ಎಂದು ಕುಮಾರ್ ತಿಳಿಸಿದರು.
ಕಡಬ ತಾಲೂಕು ಪುತ್ತೂರು ತಾಲೂಕಿನ 9 ಗ್ರಾಮ ಹಾಗೂ ಸುಳ್ಯ ತಾಲೂಕಿನ 7 ಗ್ರಾಮಗಳನ್ನು ಒಳಗೊಂಡಿದೆ. ಮೂಡಬಿದ್ರೆ ತಾಲೂಕು ಮೂಡಬಿದ್ರೆ ಹೋಬಳಿಯ ಎಲ್ಲಾ ಗ್ರಾಮಗಳನ್ನು ಒಳಗೊಂಡಿದೆ ಎಂದು ಅವರು ಹೇಳಿದರು.
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.