ಸುಮಾರು ಮೂವತ್ತು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಸಹಾಯಕರ ವಿವಿಧ ಬೇಡಿಕೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸರಕಾರದ ಗಮನ ಸೆಳೆಯಲಾಗುವುದಾಗಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಿಳಿಸಿದ್ದಾರೆ.
ಗ್ರಾಮ ಸಹಾಯಕ ಸಂಘ ಬಂಟ್ವಾಳ ತಾಲೂಕು ವತಿಯಿಂದ ಭಾನುವಾರ ಶಾಸಕರ ಕಚೇರಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ, ಗ್ರಾಮ ಸಹಾಯಕರು ಕಂದಾಯ ಇಲಾಖೆಯ ಬೆನ್ನೆಲುಗಾಗಿದ್ದು, ಅವರ ಕ್ಷೇಮಾಭಿವೃದ್ಧಿಗಾಗಿ ಯಾವುದೇ ಶಾಶ್ವತ ಯೋಜನೆ ಜಾರಿಯಾಗದೇ ಇರುವುದು ವಿಪರ್ಯಾಸ. ಈ ನಿಟ್ಟಿನಲ್ಲಿ ಸರಕಾರದ ಗಮನ ಸೆಳೆದು, ಗ್ರಾಮ ಸಹಾಯಕರ ಸಮಸ್ಯೆ, ಬೇಡಿಕೆಗಳ ಕುರಿತು ಕಂದಾಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಚರ್ಚಿಸಲಾಗುವುದಾಗಿ ಭರವಸೆ ನೀಡಿದರು.
ಗ್ರಾಮ ಸಹಾಯಕರ ಹುದ್ದೆಯನ್ನು ಖಾಯಂಗೊಳಿಸುವಂತೆ ಆಗ್ರಹಿಸಿ ಶಾಸಕರಿಗೆ ಮನವಿ ಸಲ್ಲಿಸಲಾಯಿತು. ಗ್ರಾಮ ಸಹಾಯಕರ ಸಂಘದ ಜಿಲ್ಲಾ ಗೌರವಾಧ್ಯಕ್ಷ ರಾಘವ ಗೌಡ, ಕಾರ್ಯದರ್ಶಿ ಕೃಷ್ಣಪ್ಪ ಪೂಜಾರಿ, ಅದ್ಯಕ್ಷ ಮೋಹನ್ ದಾಸ ಬಂಟ್ವಾಳ, ಸಂಘದ ತಾಲೂಕು ಕಾರ್ಯದರ್ಶಿ ಸುಂದರ ಬಿ.ಕೆ ಹಾಗೂ ಸಂಘದ ಸದಸ್ಯರು ಶಾಸಕರೊಂದಿಗೆ ಸಮಾಲೋಚನೆ ನಡೆಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಗ್ರಾಮ ಸಹಾಯಕರ ಬೇಡಿಕೆಗೆ ಶಾಸಕರ ಸ್ಪಂದನೆ"
Be the first to comment on "ಗ್ರಾಮ ಸಹಾಯಕರ ಬೇಡಿಕೆಗೆ ಶಾಸಕರ ಸ್ಪಂದನೆ"