ಬಂಟ್ವಾಳ

ಗ್ರಾಮ ಸಹಾಯಕರ ಜಿಲ್ಲಾ ಸಂಘದ ಸಭೆ

ಬ್ರಿಟಿಷರ ಕಾಲದಿಂದಲೂ ಸೇವಾ ಪ್ರಾಮುಖ್ಯತೆ ಹೊಂದಿರುವ ಗ್ರಾಮ ಸಹಾಯಕರು ಈಗಲೂ ಗೌರವಯುತವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ತಹಶೀಲ್ದಾರ್ ಪುರಂದರ ಹೆಗ್ಡೆ ಅವರು ಹೇಳಿದರು.

ಜಾಹೀರಾತು

ಭಾನುವಾರ ಬೆಳಿಗ್ಗೆ ಬಂಟ್ವಾಳ ಮಿನಿ ವಿಧಾನ ಸೌಧದ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖಾ ಗ್ರಾಮ ಸಹಾಯಕರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಕಾರ್ಯಕಾರಿಣಿ ಸಭೆಯ ಸಭಾಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮ ಸಹಾಯಕರ ಪ್ರತಿಭೆ, ಸಾಮರ್ಥ್ಯ ಹಾಗೂ ವಿದ್ಯಾರ್ಹತೆ ಗೆ ಅನುಗುಣವಾಗಿ ಸೇವೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ತಿಳಿಸಿದರು.

ಗ್ರಾಮ ಸಹಾಯಕರ ಸೇವಾ ಭದ್ರತೆ, ಸೇವಾ ಖಾಯಮಾತಿ ಮಾಡಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಲಾಗಿದ್ದು, ಈ ಬಗ್ಗೆ ಸಾಂಘಿತ ಪ್ರಯತ್ನ ನಡೆಸಿ, ರೂಪುರೇಷೆ ಹಾಕಲಾಗುವುದಾಗಿ ಜಿಲ್ಲಾ ಅಧ್ಯಕ್ಷ ಪ್ರಕಾಶ್ ಮೂಡಬಿದ್ರೆ ಅವರು ತಿಳಿಸಿದರು. ಮಂಗಳೂರು ತಾಲೂಕು ಗ್ರಾಮ ಸಹಾಯಕರ ಸಂಘದ ಅಧ್ಯಕ್ಷ ಮಾರ್ಸೆಲ್ ಡಿಸೋಜ, ಸುಳ್ಯ ತಾಲೂಕು ಸಂಘದ ಅಧ್ಯಕ್ಷ ನಾರಾಯಣ, ಬೆಳ್ತಂಗಡಿ ತಾಲೂಕು ಅಧ್ಯಕ್ಷ ಸತೀಶ್ ಹೆಗ್ಡೆ, ಬಂಟ್ವಾಳ ತಾಲೂಕು ಅಧ್ಯಕ್ಷ ಮೋಹನ್ ದಾಸ್ ಬಂಟ್ವಾಳ ಸಭೆಯಲ್ಲಿ ಉಪಸ್ಥಿತರಿದ್ದರು.

ಸುಳ್ಯ, ಪುತ್ತೂರು, ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ ಗ್ರಾಮ ಸಹಾಯಕರು ಈ ಸಭೆಯಲ್ಲಿ ಭಾಗವಹಿಸಿ, ಅನಿಸಿಕೆ ವ್ಯಕ್ತ ಪಡಿಸಿದರು.ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ ಪೂಜಾರಿ ವರದಿ ಮಂಡಿಸಿದರು. ಬಂಟ್ವಾಳ ತಾಲೂಕು ಸಂಘದ ಕಾರ್ಯದರ್ಶಿ ಸುಂದರ ಬಿ.ಕೆ. ಸ್ವಾಗತಿಸಿ, ಜಿಲ್ಲಾ ಸಂಘದ
ಗೌರವ ಅಧ್ಯಕ್ಷ ರಾಘವ ಗೌಡ ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಯಕ್ಷಗಾನದ ದಶಾವತಾರಿ ಸೂರಿಕುಮೇರು ಗೋವಿಂದ ಭಟ್ ಇನ್ನಿಲ್ಲ

ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…

12 hours ago